ಶಾಲೆಗಳಿಗೆ ಇಂದು ಗೈಡ್ ಲೈನ್ಸ್ ಬಿಡುಗಡೆ – ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಿದ್ದಾರೆ ಶಿಕ್ಷಣ ಸಚಿವರು…..

Suddi Sante Desk

ಬೆಂಗಳೂರು –

ಕೊರೊನಾ ಮೂರನೇ ಅಲೆ ಆತಂಕದ ನಡುವೆ ಯೂ ಪಾಸಿಟಿವಿಟಿ ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆಗಳನ್ನು ತೆರೆಯಲು ನಿರ್ಧಾರವನ್ನು ತೆಗೆದು ಕೊಳ್ಳಲಾಗಿದೆ.ಹೌದು ಆಗಸ್ಟ್ 23 ರಿಂದ 9 ರಿಂದ 12ನೇ ತರಗತಿಗಳನ್ನು ತೆರೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಕೊವಿಡ್ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆಗಳನ್ನು ತೆರೆಯಲಾಗುತ್ತದೆ ಎಂದು ತಿಳಿಸಿದ್ದಾರೆ. ಆಗಸ್ಟ್ 23 ರಿಂದ 9-12 ನೇ ತರಗತಿಗಳು ಮೊದಲ ಹಂತದಲ್ಲಿ ಆರಂಭವಾಗ ಲಿದ್ದು ಇಂದು ಶಿಕ್ಷಣ ಇಲಾಖೆಯಿಂದ ಈ ಒಂದು ಗೈಡ್ ಲೈನ್ಸ್ ಗಳು ಬಿಡುಗಡೆಯಾಗಲಿವೆ

ಎರಡು ದಿನಗಳ ಹಿಂದೆ ನಡೆದ ಸಭೆಯಲ್ಲಿ ಕೆಲವರು ಶಾಲೆಗಳನ್ನು ತೆರೆಯಲು ಒಪ್ಪಿಗೆ ಸೂಚಿಸಿದ್ದಾರೆ. ಇನ್ನು ಕೆಲವರು ಈಗಲೇ ಬೇಡ ಅಂತ ಹೇಳಿದ್ದಾರೆ. ಸದ್ಯ ಆಗಸ್ಟ್ 23 ರಿಂದ 9-12 ನೇ ತರಗತಿಗಳು ಆರಂಭವಾಗಲಿದ್ದು ಇದಕ್ಕೆ ಸಂಬಂಧಿಸಿದ ಮಾರ್ಗ ಸೂಚಿಗಳನ್ನು ಸರ್ಕಾರ ಇಂದು ಪ್ರಕಟಿಸಲಿದೆ. ವಿದ್ಯಾರ್ಥಿಗಳ ಆರೋಗ್ಯ ಹಿತದೃಷ್ಟಿಯಿಂದ ಶಾಲೆಗಳನ್ನು ಬಂದ್ ಮಾಡಲಾಗಿತ್ತು.ಆದರೆ ಆಗಸ್ಟ್ 23 ರಿಂದ ಶಾಲೆಗಳನ್ನ ಪುನಾರಂಭಿಸಲು ಸರ್ಕಾರ ನಿರ್ಧರಿಸಿದ್ದು ಏನೇನು ಮಾರ್ಗಸೂಚಿ ಗಳನ್ನು ಸರ್ಕಾರ ಹಾಕುತ್ತದೆ ಎಂಬುದನ್ನು ಕಾದು ನೋಡಬೇಕು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.