ಬೆಂಗಳೂರು –
ಕೋವಿಡ್ ರೂಪಾಂತರಿ ಒಮೈಕ್ರಾನ್ ಸೋಂಕು ದೃಢ ಪ್ರಮಾಣ ಹೆಚ್ಚಿರುವುದರಿಂದ ಬೆಂಗಳೂರು ಸೇರಿದಂತೆ ಮತ್ತಿತರ ಕಡೆ ಮುಚ್ಚಲ್ಪಟ್ಟಿದ್ದ ಶಾಲೆಗಳನ್ನು ಪುನರಾ ರಂಭಿಸುವ ಕುರಿತು ಶುಕ್ರವಾರ(ಜ.21ಸಿಎಂ ಅಧ್ಯಕ್ಷತೆ ಯಲ್ಲಿ ನಡೆಯಲಿರುವ ತಜ್ಞರ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.ಬೆಂಗಳೂರಿನಲ್ಲಿ ಮಾತನಾಡಿದ ಅವರು
ಕೋವಿಡ್ ಸೋಂಕು ಕೆಲ ದಿನಗಳ ಹಿಂದೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಶಾಲೆಗಳನ್ನು ಬಂದ್ ಮಾಡಲಾಗಿತ್ತು.ವಿದ್ಯಾರ್ಥಿಗಳಿಗೆ ಸೋಂಕು ಹರಡಬಹು ದೆಂಬ ಕಾರಣಕ್ಕೆ ಸರಕಾರ ಶಾಲೆ ಮುಚ್ಚುವ ತೀರ್ಮಾನ ಮಾಡಿತ್ತು. ಇದೀಗ ಶಾಲೆಗಳನ್ನು ಪುನರಾರಂಭಿಸುವ ಸಿಎಂ ಸಭೆ ನಡೆಸಲಿದ್ದು, ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದರು.

ಶಾಲೆಗಳನ್ನು ಮುಚ್ಚಬೇಕೆಂದು ತಾಂತ್ರಿಕ ಸಲಹಾ ಸಮಿತಿ ಅಥವಾ ತಜ್ಞರು ಸೂಚಿಸಿರಲಿಲ್ಲ.ಆದರೆ ಮೂರನೇ ಅಲೆ ಯಲ್ಲಿ ಸೋಂಕು ಒಬ್ಬರಿಂದ ಒಬ್ಬರಿಗೆ ಬಹು ವೇಗವಾಗಿ ಹಬ್ಬುವ ಸಾಧ್ಯತೆಯಿದೆ ಎಂದು ತಜ್ಞರು ಹೇಳಿದ್ದರು.ಇದು ವಿದ್ಯಾರ್ಥಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರ ಬಹುದೆಂಬ ಕಾರಣ ಶಾಲೆ ಬಂದ್ ಮಾಡುವ ತೀರ್ಮಾನ ವನ್ನು ಕೈಗೊಂಡಿದ್ದೇವೆ ಎಂದರು


ಇನ್ನೂ ಶಾಲೆಗಳನ್ನು ಮುಚ್ಚದಂತೆ ಖಾಸಗಿ ಶಾಲಾ ಒಕ್ಕೂಟ ದವರು ಮನವಿ ಮಾಡಿದ್ದಾರೆ.ಈಗ ಯಾವ ಯಾವ ಶಾಲೆಗ ಳಲ್ಲಿ ಎಷ್ಟೆಷ್ಟು ಪಾಸಿಟಿವ್ ಬಂದಿದೆ ಎಂಬುದನ್ನು ನಾವು ಅಧ್ಯಯನ ಮಾಡಿದ್ದೇವೆ.ಹೆಚ್ಚು ಸೋಂಕು ಇರುವ ಶಾಲೆಗ ಳನ್ನು ಬಂದ್ ಮಾಡಲು ಜಿಲ್ಲಾಡಳಿತಕ್ಕೆ ಸೂಚನೆ ಕೊಟ್ಟಿ ದ್ದೇವೆ.ಹೆಚ್ಚು ಸೋಂಕು ಕಾಣಿಸಿಕೊಂಡಿರುವ ಶಾಲೆಗಳನ್ನು ಸದ್ಯಕ್ಕೆ ಬಂದ್ ಮಾಡಲಾಗಿದೆ.ಉಳಿದಿರುವ ಕಡೆ ಎಂದಿ ನಂತೆ ಶಾಲೆಗಳು ನಡೆಯುತ್ತಿವೆ.ಕೋವಿಡ್ ಪರಿಸ್ಥಿತಿ ಆಧರಿಸಿ ಮುಂದಿನ ದಿನಗಳಲ್ಲಿ ತೀರ್ಮಾನ ಮಾಡಲಾಗು ವುದು ಎಂದರು.

ಸದ್ಯಕ್ಕೆ ಮುಚ್ಚಲ್ಪಟ್ಟಿರುವ ಜಿಲ್ಲೆಗಳಲ್ಲಿ ಶಾಲೆಗಳ ಪುನಾ ರಂಭಿಸಲು ಚಿಂತನೆ ನಡೆಸಿದ್ದೇವೆ.5ನೆ ತರಗತಿ ಮೇಲ್ಪಟ್ಟು ಶಾಲೆಗಳನ್ನು ತೆರೆಯಲು ಗಂಭೀರ ಚಿಂತನೆ ನಡೆದಿದೆ. ಅಂತಿಮವಾಗಿ ಶುಕ್ರವಾರದ ಸಭೆ ಮೇಲೆ ಎಲ್ಲವೂ ಅವಲಂಬಿತವಾಗಿದೆ.ಕ್ಲಸ್ಟರ್ ಮಟ್ಟದಲ್ಲಿ ಶಾಲೆ ಬಂದ್ ಮಾಡಲು ಸಲಹೆ ಬಂದಿದೆ.ನಾವು ಏಕಾಏಕಿ ಶಾಲೆ ಬಂದ್ ಮಾಡಲು ಸಾಧ್ಯವಿಲ್ಲ.ಎಲ್ಲ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ಮಾಡಬೇಕು. ವಿದ್ಯಾರ್ಥಿಗಳ ಹಿತದೃಷ್ಟಿ, ಆರೋಗ್ಯ, ಪೋಷಕರ ಅಭಿಪ್ರಾಯ ಪಡೆದು ಸೂಕ್ತ ನಿರ್ಧಾರ ಮಾಡಲಾಗುವುದು’ಎಂದು ಬಿ.ಸಿ.ನಾಗೇಶ್ ತಿಳಿಸಿದರು