ನಿರ್ಧಾರವಾಗಲಿದೆ ನಾಳೆ ರಾಜ್ಯದ ಭವಿಷ್ಯ – ರಾಜ್ಯದಲ್ಲಿ ಶರವೇಗ ದಲ್ಲಿ ಹೆಚ್ಚಾಗುತ್ತಿದೆ ಕರೋನ ನಾಳೆ CM ಮಹತ್ವದ ಸಭೆ…..

Suddi Sante Desk

ಬೆಂಗಳೂರು –

ದಿನದಿಂದ ದಿನಕ್ಕೆ ರಾಜ್ಯದಲ್ಲಿ ಶರವೇಗದಲ್ಲಿ ಹರಡುತ್ತಿರುವ ಮಹಾಮಾರಿ ಕೊರೊನಾ ಕುರಿತು ರಾಜ್ಯದಲ್ಲಿ ಮುಂದಿನ ನಿರ್ಧಾರ ತೆಗೆದುಕೊಳ್ಳುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ಅಂದರೆ ಸೋಮವಾರ ಮಹತ್ವದ ಸಭೆಯನ್ನು ಕರೆದಿದ್ದಾರೆ.ಸೋಂಕು ಹರಡುತ್ತಿರು ವ ಹಿನ್ನೆಲೆಯಲ್ಲಿ ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಈ ಒಂದು ಸಭೆ ನಡೆಯಲಿದೆ

ನಾಳೆ ಸಂಜೆ 4 ಗಂಟೆಗೆ ಅಧಿಕಾರಿಗಳೊಂದಿಗೆ ಸಿಎಂ ಸಭೆ ನಡೆಸಲಿದ್ದಾರೆ.ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗ ಳ ಸಭೆ ನಡೆಯಲಿದ್ದು ಸಚಿವರಾದ ಆರ್.ಅಶೋಕ್, ಡಾ.ಕೆ ಸುಧಾಕರ್ ಕೂಡ ಭಾಗಿಯಾಗಲಿದ್ದಾರೆ.ಇವರೊಂದಿಗೆ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು, ಆರೋಗ್ಯ ಇಲಾಖೆ ಅಧಿಕಾರಿಗಳು ಕೂಡಾ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಕೊರೋನಾ ತಡೆಗೆ ರಾಜ್ಯದಲ್ಲಿ ಸದ್ಯ ವಿಧಿಸಲಾಗಿರುವ ಕಠಿಣ ನಿಯಮಗಳು ಜನವರಿ 19 ಕ್ಕೆ ಅಂತ್ಯವಾಗಲಿವೆ. ಜನವರಿ 31 ರ ವರೆಗೆ ಅನೇಕ ನಿಯಮಗಳು ಮುಂದುವ ರೆಯಲಿವೆ.ಜನವರಿ 17 ರ ಸೋಮವಾರ ಬೆಳಗ್ಗೆ 5 ಗಂಟೆಗೆ ವೀಕೆಂಡ್ ಕರ್ಫ್ಯೂ ಕೂಡ ಮುಕ್ತಾಯವಾಗಲಿದೆ.

ಹೀಗಾಗಿ ನಾಳಿನ ಸಭೆಯಲ್ಲಿ ವೀಕೆಂಡ್ ಕರ್ಫ್ಯೂ, ಕಠಿಣ ನಿಯಮಗಳನ್ನು ಮುಂದುವರೆಸುವ ಕುರಿತಾಗಿ ಚರ್ಚೆ ನಡೆಸಲಾಗುತ್ತದೆ. ಅಲ್ಲದೆ, ಕೊರೋನಾ ನಿಯಂತ್ರಣಕ್ಕೆ ಮತ್ತಷ್ಟು ನಿರ್ಬಂಧ ಜಾರಿಗೊಳಿಸುವ ಸಾಧ್ಯತೆ ಇದ್ದು ಒಟ್ಟಾರೆ ರಾಜ್ಯದ ಭವಿಷ್ಯ ನಾಳೆ ನಿರ್ಧಾರವಾಗಲಿದೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.