ಧಾರವಾಡ –
ಪ್ರಮೋಷನ್ ದಿನನೇ ಹೃದಯಾಘಾತದಿಂದ ಸರ್ಕಾರಿ ಅಧಿಕಾರಿಯೊಬ್ಬರು ನಿಧನರಾದ ಘಟನೆ ಧಾರವಾಡ ದಲ್ಲಿ ನಡೆದಿದೆ.ಧಾರವಾಡ ಜಿಲ್ಲಾ ಖಜಾನೆ ಸಹಾಯಕ ನಿರ್ದೇಶಕ ಜಯ ಪ್ರಕಾಶ್ ಕಲಕೋಟಿ ನಿಧನರಾದ ಅಧಿಕಾರಿ ಯಾಗಿದ್ದಾರೆ.
ಇವತ್ತೇ ಧಾರವಾಡ ಜಿಲ್ಲಾ ಖಜಾನೆ ಸಹಾಯಕ ನಿರ್ದೇಶಕರಾಗಿ ಅಧಿಕಾರ ಸ್ವೀಕಾರ ಮಾಡಿದ್ದರು ಜಯಪ್ರಕಾಶ್.ಸಂಜೆ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.ಈ ಮೊದಲು ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕು ಖಜಾನೆ ಕಚೇರಿಯಲ್ಲಿ ದ್ದರು ಜಯಪ್ರಕಾಶ್.
ಕಳೆದ ೧೫ ದಿನಗಳ ಹಿಂದೆ ಪ್ರಮೋಷನ್ ಆಗಿತ್ತು ಬೆಳಿಗ್ಗೆ ಅಧಿಕಾರ ಸ್ವೀಕಾರಿಸಿದ್ದ ಜಯಪ್ರಕಾಶ್ ಅವರಿಗೆ ಸಂಜೆ ಎದೆ ನೋವು ಕಾಣಿಸಿಕೊಂಡಿತು ಸಂಜೆ ಖಾಸಗಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಧಾರವಾಡ…..