ಧಾರವಾಡದ ಕೃಷಿ ವಿಶ್ವ ವಿದ್ಯಾಲಯದಲ್ಲಿ ರಾಜ್ಯಪಾಲರು ವಿವಿ ಕ್ಯಾಂಪಸ್ ಪರಿಶೀಲನೆ ಮಾಡಿ ವಿದ್ಯಾರ್ಥಿಗಳೊಂದಿಗೆ ಸಂವಾದ…..

Suddi Sante Desk


ಧಾರವಾಡ –

ರಾಜ್ಯಪಾಲ ಥಾವರಚಂದ್ ಗೆಹ್ಲೋತ್ ಧಾರವಾಡ ಜಿಲ್ಲೆಯ ಪ್ರವಾಸ ಕೈಗೊಂಡಿದ್ದು.ವಿಶೇಷ ವಿಮಾನದ ಮೂಲಕ ನಗರಕ್ಕೆ ಆಗಮಿಸಿದ ಅವರು ಹುಬ್ಬಳ್ಳಿಯಿಂದ ಧಾರವಾಡದ ಕೃಷಿ ವಿವಿ ಗೆ ಆಗಮಿಸಿ ವಿಶ್ವವಿದ್ಯಾಲಯದ ಲ್ಲಿನ ಕೆಲವೊಂದಿಷ್ಟು ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲ ನೆ ಮಾಡಿದರು.

ನಂತರ ಕೃಷಿ ವಿಶ್ವವಿದ್ಯಾಲಯದ ಕೆಲ ಕ್ಯಾಂಪಸ್ ಗೆ ಭೇಟಿ ನೀಡಿದ ರಾಜ್ಯಪಾಲರು ಹಾಗೂ ವಿವಿಯ ಕುಲಾಧಿಪತಿ ಗಳೂ ಆದ ಥಾವರಚಂದ್ ಗೆಹ್ಲೋತ್ ಅವರು ಕೃಷಿ ವಿವಿ ಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದೇಶಿ ವಿದ್ಯಾರ್ಥಿಗ ಳೊಂದಿಗೆ ಸಂವಾದ ನಡೆಸಿದರು.

ವಿಶ್ವವಿದ್ಯಾಲಯದ ಪ್ರಯೋಗಾಲಯಗಳನ್ನು ವೀಕ್ಷಿಸಿದರು ಇದೇ ವೇಳೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ ಇವರು ಕುಲಪತಿ ಪ್ರೊ.ಎಂ.ಬಿ.ಚೆಟ್ಟಿ ಕಾರ್ಯಕ್ಕೆ ಮತ್ತು ವಿವಿ ಕ್ಯಾಂಪಸ್ ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇನ್ನೂ ಈ ಒಂದು ಸಮಯದಲ್ಲಿ ಮಹಾನಗರಪಾಲಿಕೆ ಅಪರ ಆಯುಕ್ತ ಮಾಧವ ಗಿತ್ತೆ ಸೇರಿದಂತೆ ಹಲವರು ಉಪಸ್ಥಿತರಿ ದ್ದರು ಇನ್ನೂ ಇದಕ್ಕೂ ಮುನ್ನ ರಾಜ್ಯಪಾಲರಿಗೆ ಗೌರವ ರಕ್ಷೆ ನೀಡಿ ಸ್ವಾಗತಿಸಲಾಯಿತು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.