ಅದ್ದೂರಿಯಾಗಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹೊಸೂರ ಸರ್ಕಾರಿ ಸಾ

Suddi Sante Desk
ಅದ್ದೂರಿಯಾಗಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹೊಸೂರ ಸರ್ಕಾರಿ ಸಾ

ಹೊಸೂರ

ಸಮೂಹ ಸಂಪನ್ಮೂಲ ಕೇಂದ್ರ ಯಲಿಶಿರೂರ್  ನಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಹೊಸೂರ ಗ್ರಾಮದಲ್ಲಿ ಅದ್ದೂರಿಯಾಗಿ ಜರುಗಿತು ಕಾರ್ಯಕ್ರಮದ ಉದ್ಘಾಟನೆಯನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಸೂರು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಸದಸ್ಯರು ಗ್ರಾಮ ಪಂಚಾಯಿತಿಯ ಸದಸ್ಯರು ಡೊಳ್ಳು ಬಾರಿಸುವ ಮೂಲಕ ಉದ್ಘಾಟಿಸಿದರು.

 

ಪ್ರಾಸ್ತಾವಿಕವಾಗಿ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಸುವರ್ಣ ಚವಡಿ ರವರು ಪ್ರತಿಭಾ ಕಾರಂಜಿಯ ಮಹತ್ವವನ್ನು ತಿಳಿಸಿಕೊಟ್ಟರು. ಮಕ್ಕಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಯಿತು.

 

ಕಾರ್ಯಕ್ರಮದಲ್ಲಿ ಗದಗ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನ್ಯಾಸಕರಾದ ಎಚ್ ಬಿ ರೆಡ್ಡೇರ, ಶರಣು ಗೋಗೇರಿ, ಜಿ ಡಿ ದಾಸರ ಮತ್ತು ಗದಗ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ವಿ ಎಂ ಹಿರೇಮಠ, ಗದಗ ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ  ಎಸ್ ಆರ್ ಬಂಡಿ, ಮತ್ತು ಸಿ ಆರ್ ಪಿ ಬಿ ಆರ್ ಪಿ ಇ ಸಿ ಓ ರವರು ಭಾಗವಹಿಸಿದ್ದರು.

 

https://youtu.be/XXcvetwaQxcನಿವೃತ್ತ ಉಪನ್ಯಾಸಕರಾದ  ಎಸ್ ಆರ್ ಹೂಗಾರ ರವರಿಗೆ ಸನ್ಮಾನಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾ ರಿಗಳಾದ ನಡುವಿನಮನಿ ರವರು ಶುಭಹಾರೈಕೆಗ ಳನ್ನು ತಿಳಿಸಿದ್ದರ ಆಗಮಿಸಿದ ಎಲ್ಲಾ ಅತಿಥಿಗಳಿಗೆ ನೆನಪಿನ ಕಾಣಿಕೆಯನ್ನ ನೀಡಲಾಯಿತು. ನಿರ್ಣಾಯಕರಿಗೆ ಅಭಿನಂದನಾ ಪತ್ರವನ್ನು ನೀಡಿ ಗೌರವಿಸಲಾಯಿತು.

 

ಮಕ್ಕಳಿಗೆ ಕಲಿಕೋಪಕರಣಗಳನ್ನು ಪ್ರಥಮ ದ್ವಿತೀಯ ತೃತೀಯ ಬಹುಮಾನಗಳಾಗಿ ವಿತರಿಸಲಾಯಿತು. ಶಾಲೆಯ ಎಲ್ಲ ಶಿಕ್ಷಕರು ಹಾಜರಿದ್ದರು  ಮುಳ್ಳೂರು ಶಿಕ್ಷಕರು ನಿರೂಪಿಸಿದರು  ಪೂಜಾರ ಗುರುಗಳು ವಂದಿಸಿದರು

 

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.