ಮುಖ್ಯಶಿಕ್ಷಕ ಹೀಗೆ ಮಾಡೊದಾ ಗ್ರಾಮಸ್ಥರ ಕೈಗೆ ಸಿಗುತ್ತಿದ್ದಂತೆ ಸ್ಥಳದಿಂದ ಎಸ್ಕೇಪ್…..

Suddi Sante Desk

ವಿಜಯಪುರ –

ಮಧ್ಯಾಹ್ನದ ಬಿಸಿಯೂಟದ ಅಕ್ಕಿಯನ್ನು ಕದ್ದು ಮಾರಾಟ ಮಾಡಲು ತೆಗೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಸಿಕ್ಕಿ ಬಿದ್ದಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೊಮ್ಮನಹಳ್ಳಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ ಬಿಸಿಯೂಟದ ಅಕ್ಕಿಯನ್ನು ಮುಖ್ಯ ಶಿಕ್ಷಕರೊ ಬ್ಬರು ಕದ್ದು ಕಾಳಸಂತೆಯಲ್ಲಿ ಮಾರಾಟ ಮಾಡಲು ತೆಗೆದು ಕೊಂಡು ಹೋಗುತ್ತಿದ್ದರು.ಈ ಕುರಿತು ಮಾಹಿತಿ ಪಡೆದ ಗ್ರಾಮಸ್ಥರು ಅಕ್ಕಿ ಸಾಗಿಸುವ ವಾಹನವನ್ನು ತಡೆದಿದ್ದಾರೆ

ಮುಖ್ಯ ಶಿಕ್ಷಕ ಎಸ್.ಡಿ.ಬಿದನೂರ ಶಾಲೆಯ ಅಡುಗೆ ಕೋಣೆಯಲ್ಲಿದ್ದ 50ಕ್ಕೂ ಹೆಚ್ಚು ಅಕ್ಕಿ ಚೀಲಗಳನ್ನು ಟಾಟಾ ಏಸ್ ವಾಹನದಲ್ಲಿ ಹೇರುತ್ತಿದ್ದರು.ಸುದ್ದಿ ತಿಳಿದ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಹೆದರಿದ ಮುಖ್ಯ ಶಿಕ್ಷಕ ಹಾಗೂ ವಾಹನ ಚಾಲಕ ಅಲ್ಲಿಂದ ಪರಾರಿಯಾಗಿದ್ದಾರೆ.ತಕ್ಷಣ ಗ್ರಾಮಸ್ಥರು ಶಾಲೆಗೆ ಮುತ್ತಿಗೆ ಹಾಕಿ ವಾಹನದ ಚಕ್ರಗಳ ಗಾಳಿ ತೆಗೆದು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸ ಬೇಕು ಒತ್ತಾಯಿಸಿದರು.

ಗ್ರಾಮಸ್ಥರ ಒತ್ತಾಯಕ್ಕೆ ಮಣಿದು ಇಲಾಖೆಯ ಅಧಿಕಾರಿ ಗಳು ಹಾಗೂ ಬಿಸಿಯೂಟಕ್ಕೆ ಸಂಬಂಧಿಸಿದ ಅಧಿಕಾರಿಗಳು ಭೇಟಿ ನೀಡಿ ಗ್ರಾಮಸ್ಥರ ಜತೆ ಮಾತುಕತೆ ನಡೆಸಿ, ಮುಖ್ಯ ಶಿಕ್ಷಕನ ವಿರುದ್ಧ ಯಾರಾದರೂ ದೂರು ನೀಡಿದರೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಇನ್ನೂ ಸುದ್ದಿ ತಿಳಿದ ಬಿಇಒ ಸ್ಥಳಕ್ಕೆ ಭೇಟಿ ನೀಡಿ ದರು ಸಿಂದಗಿ ಬಿಇಒ ಎಸ್.ಎಸ್.ನಾಗನೂರ ಸಹ ಶಾಲೆಗೆ ಭೇಟಿ ನೀಡಿ ಗ್ರಾಮಸ್ಥರಿಂದ ಮಾಹಿತಿ ಕಲೆ ಹಾಕಿದರು.ನಂತರ ಮಾತನಾಡಿದ ಅವರು ಮುಖ್ಯ ಶಿಕ್ಷಕ ಸದ್ಯಕ್ಕೆ ಪರಾರಿಯಾ ಗಿದ್ದಾನೆ.ಶಾಲೆಗೆ ವಾಪಸ್ ಆಗದಿದ್ದರೆ ಅವರನ್ನು ತಕ್ಷಣ ಅಮಾನತು ಮಾಡಲಾಗುವುದು ಜೊತೆಗೆ ಇಲಾಖಾ ತನಿಖೆ ಸಹ ನಡೆಸಲಾಗುವುದು ಎಂದು ಭರವಸೆ ನೀಡಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.