ಶಾಲೆಗೂ ವ್ಯಾಪಿಸಿದ ಹಿಜಾಬ್ ಸಂಘರ್ಷ – ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಗಲಾಟೆ ಆತಂಕದಲ್ಲಿ ಇಲಾಖೆ…..

Suddi Sante Desk

ಬೆಂಗಳೂರು –

ಹಿಜಾಬ್ ಗಲಾಟೆ ಇದೀಗ ಶಾಲೆಗೂ ವ್ಯಾಪಿಸಿದೆ.ಹೌದು ಬೆಂಗಳೂರಿನ ಚಂದ್ರ ಲೇಔಟ್ ನಲ್ಲಿರುವ ವಿದ್ಯಾಸಾಗರ್ ಶಾಲೆಯಲ್ಲಿ ಬೆಳಗ್ಗೆ ಹಿಜಾಬ್ ಗಲಾಟೆ ನಡೆಡಿದ್ದು ಈ ವಿಚಾರವಾಗಿ ಪಾಲಕರು ಮತ್ತು ಶಾಲಾ ಆಡಳಿತ ಮಂಡಳಿ ವಿರುದ್ಧ ಮಾತಿನ ಚಕಮಕಿ ನಡೆದಿದೆ.ಇನ್ನೂ ಪೊಲೀಸರು ಶಾಲೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂದಾದರು.ಈ ಮಧ್ಯೆ ಶಾಲಾ ಶಿಕ್ಷಕಿ ಒಬ್ಬರು ತರಗತಿ ಬೋರ್ಡ್ ಮೇಲೆ KLS ಎಂದು ಬರೆದು ನೀವೇ ಅರ್ಥ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ ಮತ್ತು 7ನೇ ತರಗತಿ ವಿದ್ಯಾರ್ಥಿಗೆ ಹಿಜಾಬ್ ತೆಗೆಯುವಂತೆ ಶಾಲೆಯಲ್ಲಿ ಶಿಕ್ಷಕಿ ಸೂಚನೆ ನೀಡಿದ್ದಾರೆ.

ಈ ವಿಚಾರವಾಗಿ ಗಲಾಟೆ ನಡೆದಿದೆ ಎನ್ನಲಾಗಿದೆ. ಆ ಶಾಲಾ ಶಿಕ್ಷಕಿಯನ್ನು ವಿಚಾರಣೆ ಮಾಡಿ ಮಾಹಿತಿಯನ್ನು ಪಡೆಯ ಲಾಗಿದ್ದು ಪರಿಸ್ಥಿತಿ ಮಿತಿ ಮಿರುತ್ತಿದ್ದನಂತೆ ಬೆಂಗಳೂರು ದಕ್ಷಿಣ ಜಿಲ್ಲಾ ಉಪನಿರ್ದೇಶಕ ರಾಜೇಂದ್ರ ಶಾಲೆಗೆ ಭೇಟಿ ನೀಡಿ ಪಾಲಕರು ಮತ್ತು ಆಡಳಿತ ಮಂಡಳಿಯಿಂದ ಮಾಹಿತಿ ಪಡೆದಿದ್ದಾರೆ.ಸಧ್ಯ ಸ್ಥಳದಲ್ಲಿ ಪೊಲೀಸರು ಮೋಕ್ಕಾಂ ಹೂಡಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.