This is the title of the web page
This is the title of the web page

Live Stream

[ytplayer id=’1198′]

July 2024
T F S S M T W
 123
45678910
11121314151617
18192021222324
25262728293031

| Latest Version 8.0.1 |

State News

ಸರ್ಕಾರಿ ನೌಕರರ ವರ್ಗಾವಣೆ ಕುರಿತಂತೆ ಮಹತ್ವದ ತೀರ್ಪು ನೀಡಿದ ಹೈಕೋರ್ಟ್ – ಹೈದರಾಬಾದ್ ಕರ್ನಾಟಕ ವ್ಯಾಪ್ತಿಯ ವರ್ಗಾವಣೆಗೂ ನಿರ್ಬಂಧವಿಲ್ಲವೆಂದ ನ್ಯಾಯಾಲಯ…..

WhatsApp Group Join Now
Telegram Group Join Now

ಬೆಂಗಳೂರು

ಸರ್ಕಾರಿ ನೌಕರರ ವರ್ಗಾವಣೆ ಕುರಿತಂತೆ ಮಹತ್ವದ ತೀರ್ಪು ನೀಡಿದ ಹೈಕೋರ್ಟ್  ಹೈದರಾಬಾದ್ ಕರ್ನಾಟಕ ವ್ಯಾಪ್ತಿಯ ವರ್ಗಾವಣೆಗೂ ನಿರ್ಬಂಧವಿಲ್ಲವೆಂದ ನ್ಯಾಯಾಲಯ ಹೌದು

ಹೌದು ಹೈದರಾಬಾದ್‌-ಕರ್ನಾಟಕ (ಹೈ-ಕ) ಪ್ರದೇಶದಲ್ಲಿ ಸ್ಥಳೀಯ ಮೀಸಲಾತಿ ಅಡಿ ನೇಮಕಗೊಂಡ ಸರ್ಕಾರಿ ನೌಕರನನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಹೈ-ಕ ಪ್ರದೇಶದಿಂದ ಹೊರ ಭಾಗಗಳಿಗೆ ವರ್ಗಾವಣೆ ಮಾಡಲು ಯಾವುದೇ ನಿರ್ಬಂಧ ಇರುವುದಿಲ್ಲ ವೆಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಹೈ-ಕ ಪ್ರದೇಶದ ಮೀಸಲಾತಿ ಅಡಿಯಲ್ಲಿ ನೇಮಕವಾಗಿದ್ದ ಸಬ್ ರಿಜಿಸ್ಟ್ರಾರ್ ಎನ್. ಶ್ರೀಕಾಂತ್ ಅವರನ್ನು ಹೊರ ಪ್ರದೇಶಕ್ಕೆ ವರ್ಗಾವಣೆ ಮಾಡಿದ್ದ ಸರ್ಕಾರದ ಕ್ರಮವನ್ನು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ( ಕೆಎಟಿ)ಎತ್ತಿ ಹಿಡಿದಿತ್ತು.

ಈ ಆದೇಶವನ್ನು ಪ್ರಶ್ನಿಸಿ ಇನ್ನೊರ್ವ ಸಬ್ ರಿಜಿಸ್ಟ್ರಾರ್ ಎಸ್.ನಂದೀಶ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನು ಶಿವರಾಮನ್ ಹಾಗೂ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

ಕರ್ನಾಟಕ ಸಾರ್ವಜನಿಕ ಉದ್ಯೋಗ (ಹೈದ್ರಾಬಾದ್ ಕರ್ನಾಟಕ ಪ್ರದೇಶಕ್ಕೆ ನೇಮ ಕಾತಿಯಲ್ಲಿ ಮೀಸಲು) ಆದೇಶ 2013ರಲ್ಲಿ ಹೈ-ಕ ಮೀಸಲು ಅಡಿಯಲ್ಲಿ ನೇಮಕವಾದವ ರನ್ನು ಹೊರ ಭಾಗಗಳಿಗೆ ವರ್ಗಾವಣೆ ಮಾಡುವು ದಕ್ಕೆ ಸಂಬಂಧಿಸಿದಂತೆ ಯಾವುದೇ ನಿರ್ಬಂಧ ಇರುವುದಿಲ್ಲ.

ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಸರ್ಕಾರ ಹೊರ ಪ್ರದೇಶಕ್ಕೆ ವರ್ಗಾವಣೆ ಮಾಡಬಹುದು’ ಎಂದು ನ್ಯಾಯಪೀಠ ಅಭಿಪ್ರಾ ಯಪಟ್ಟಿದೆ.ಇನ್ನೂ ಪ್ರಕರಣ ಕುರಿತಂತೆ ನೊಡೊದಾದರೆ ಎನ್.ಶ್ರೀಕಾಂತ್ ಅವರು ಹೈ-ಕ ವೃಂದದಲ್ಲಿ ಸಬ್‌ ರಿಜಿಸ್ಟ್ರಾರ್ ಆಗಿ ನೇಮಕವಾಗಿ  ದ್ದರು.

ತರಬೇತಿ ಬಳಿಕ ಅವರನ್ನು ಚಿಕ್ಕಮಗಳೂರು ನಂತರ ಮೈಸೂರು ಪಶ್ಚಿಮದ ಸಬ್ ರಿಜಿಸ್ಟ್ರಾರ್ ಆಗಿ ನೇಮಕ ಮಾಡಲಾಗಿತ್ತು.ನಂದೀಶ್ ಅವರನ್ನು ಶ್ರೀಕಾಂತ್ ಅವರ ಹುದ್ದೆಗೆ ನಿಯೋ ಜಿಸಿದ್ದು, ಶ್ರೀಕಾಂತ್ ಅವರಿಗೆ ಯಾವುದೇ ಹುದ್ದೆ ತೋರಿಸದೆ ವರ್ಗಾವಣೆ ಮಾಡಲಾಗಿತ್ತು. ಈ ವರ್ಗಾವಣೆ ಆದೇಶವನ್ನು ಪ್ರಶ್ನಿಸಿ ಶ್ರೀಕಾಂತ್; ಅವಧಿ ಪೂರ್ವ ವರ್ಗಾವಣೆ ಎಂದು ಆರೋಪಿಸಿ ಕೆಎಟಿ ಮೆಟ್ಟಿಲೇರಿದ್ದರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk