ಅಧಿಕಾರಿ ವಹಿಸಿಕೊಂಡ ನೂತನ BEO – ಸ್ವಾಗತ ಮಾಡಿಕೊಂಡು ಬರಮಾಡಿಕೊಂಡ ಶಿಕ್ಷಕ ಬಂಧು ಗಳು…..

Suddi Sante Desk

ಹನೂರು –

ಹನೂರು ತಾಲ್ಲೂಕಿನ ಶೈಕ್ಷಣಿಕ ವಲಯದ ಕ್ಷೇತ್ರ ಶಿಕ್ಷಣಾ ಧಿಕಾರಿಯಾಗಿ ಶಿವರಾಜು ಅಧಿಕಾರ ಸ್ವೀಕರಿಸಿದ್ದಾರೆ

ಬಳಿಕ ಮಾತನಾಡಿದ ಶಿವರಾಜು ಅವರು ಕಳೆದ ಐದು ವರ್ಷಗಳಿಂದ ಹನೂರು ಶೈಕ್ಷಣಿಕ ವಲಯವು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದೆ.ಇದೇ ನಿಟ್ಟಿನಲ್ಲಿ ಮುಂದಿನ ವರ್ಷ ನಡೆಯಲಿರುವ ಪರೀಕ್ಷೆಯನ್ನು ಗಮನದಲ್ಲಿಟ್ಟುಕೊಂಡು ಈಗಿನಿಂದಲೇ ವಿದ್ಯಾರ್ಥಿಗಳಿಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ವಿದ್ಯಾರ್ಥಿಗಳಲ್ಲಿ ಪರೀಕ್ಷೆಯ ಭಯವನ್ನು ಹೋಗಲಾಡಿಸಿ ರಾಜ್ಯದಲ್ಲಿಯೇ ಮೊದಲನೇ ಸ್ಥಾನ ಪಡೆಯಲು ಶ್ರಮ ವಹಿಸುತ್ತೇನೆ ಶೈಕ್ಷಣಿಕ ವಲಯದ ಎಲ್ಲ ಶಿಕ್ಷಕರು ನನಗೆ ತಮ್ಮ ಸಹಕಾರ ನೀಡಿ ಶೈಕ್ಷಣಿಕ ಪ್ರಗತಿಗೆ ಸಹಕಾರ ನೀಡುವಂತೆ ಮನವಿ ಮಾಡಿದರು.ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ ಟಿ.ಆರ್.ಸ್ವಾಮಿ ಅವರನ್ನು ಹಿರಿಯ ಉಪನ್ಯಾಸಕರು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗೆ ವರ್ಗಾವಣೆಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯು ಆದೇಶಿಸಿತ್ತು.ಇನ್ನೂ ನೂತನ ಬಿಇಓ ಅವರನ್ನು ತಾಲೂಕಿನ ಶಿಕ್ಷಕ ಬಂಧುಗಳು ಸ್ವಾಗತಿಸಿ ಬರಮಾಡಿಕೊಂಡರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.