ಸರ್ಕಾರಿ ಶಾಲೆಗಳಿಗೆ ಬಂತು ಹೊಸ ಆದೇಶ – ಸಚಿವ ಸಂಪುಟದ ಘೋಷಣೆಯಂತೆ ಶೀಘ್ರದಲ್ಲೇ ಆರಂಭ…

Suddi Sante Desk
ಸರ್ಕಾರಿ ಶಾಲೆಗಳಿಗೆ ಬಂತು ಹೊಸ ಆದೇಶ – ಸಚಿವ ಸಂಪುಟದ ಘೋಷಣೆಯಂತೆ ಶೀಘ್ರದಲ್ಲೇ ಆರಂಭ…

ಬೆಂಗಳೂರು

ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಒಂದರಿಂದ 10ನೇ ತರಗತಿ ಮಕ್ಕಳಿಗೆ ರಾಗಿ ಹೆಲ್ತ್ ಮಿಕ್ಸ್ ಪುಡಿ ಮಿಶ್ರಿತ ಬಿಸಿ ಹಾಲು ನೀಡುವ ಕಾರ್ಯಕ್ರಮವನ್ನು ವಾರದಲ್ಲಿ ಐದು ದಿನಗಳಿಗೆ ವಿಸ್ತರಿಸಿ ಸರ್ಕಾರ ಆದೇಶಿ ಸಿದೆ.ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿ ದಂತೆ ಶಾಲಾ ಮಕ್ಕಳಿಗೆ ವಾರದಲ್ಲಿ ಐದು ದಿನ ಕ್ಷೀರ ಭಾಗ್ಯ ಹಾಲಿನ ಜೊತೆಗೆ ರಾಗಿ ಹೆಲ್ತ್ ಮಿಕ್ಸ್ ನೀಡಲು ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು.

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿರುವ ಮಕ್ಕಳಿಗೆ ಪ್ರಸ್ತುತ ಚಿಕ್ಕಬಳ್ಳಾಪುರ ಜಿಲ್ಲೆ ಮುದ್ದೇನಹಳ್ಳಿ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ನಿಂದ ವಾರದಲ್ಲಿ ಮೂರು ದಿನ ಕ್ಷೀರ ಭಾಗ್ಯ ಯೋಜನೆಯ ಬಿಸಿ ಹಾಲಿನ ಜೊತೆಗೆ ಸಾಯಿ ಶ್ಯೂರ್ ಹೆಲ್ತ್ ಮಿಕ್ಸ್ ಪುಡಿ ವಿತರಿಸಲಾ ಗುತ್ತಿದೆ. ಇನ್ನು ವಾರದಲ್ಲಿ ಐದು ದಿನ ಸರ್ಕಾರಿ ಮತ್ತು ಅನುದಾನಿತ ಶಾಲೆ ಮಕ್ಕಳಿಗೆ ರಾಗಿಮಾಲ್ಟ್ ವಿತರಿಸಲಾ ಗುವುದು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.