ಶಿಕ್ಷಕರಿಗೆ ನೊಟೀಸ್ ನೀಡಿದ BEO – ಸಂಘಟನೆಗಳ ದೂರಿನ ಹಿನ್ನಲೆಯಲ್ಲಿ ನೊಟೀಸ್ ಜಾರಿ…..

Suddi Sante Desk
ಶಿಕ್ಷಕರಿಗೆ ನೊಟೀಸ್ ನೀಡಿದ BEO – ಸಂಘಟನೆಗಳ ದೂರಿನ ಹಿನ್ನಲೆಯಲ್ಲಿ ನೊಟೀಸ್ ಜಾರಿ…..

ಬೀದರ್

ನಾಲ್ವರು ಶಿಕ್ಷಕರಿಗೆ ನೋಟಿಸ್ ನೀಡಿರುವ ಪ್ರಕರಣ ವೊಂದು ಬೀದರ್ ನಲ್ಲಿ ಬೆಳಕಿಗೆ ಬಂದಿದೆ, ಅಕ್ಟೋಬರ್​ ನಲ್ಲಿ ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಜಿಲ್ಲೆಯ ಔರಾದ್​ ತಾಲೂಕಿನ ನಾಲ್ವರು ಶಿಕ್ಷಕರಿಗೆ  ನೋಟಿಸ್ ನೀಡಲಾಗಿದೆ.ಕಾರಣ ಕೇಳಿ ನಾಲ್ವರಿಗೆ ಔರಾದ್ ಬಿಇಓ ಅವರಿಂದ ನೋಟಿಸ್​ ಜಾರಿ ಮಾಡಲಾಗಿದೆ.

ಔರಾದ್​ನಲ್ಲಿ ಆರ್​​ಎಸ್​​ಎಸ್​​ ಪಥಸಂಚಲನ ನಡೆದಿತ್ತು. ಶಿಕ್ಷಕರಾದ ಮಹದೇವ​, ಶಾಲಿವಾನ್​, ಪ್ರಕಾಶ್ ಮತ್ತು ಸತೀಶ್​​ ಭಾಗವಹಿಸಿದ್ದರು. ಈ ಬಗ್ಗೆ ಅಕ್ಟೋಬರ 27 ರಂದು ದಲಿತ ಸೇನೆಯ ಮುಖಂಡರು ಬಿಇಒಗೆ ದೂರು ನೀಡಿದ್ದರು. ಜೊತೆಗೆ ಶಿಕ್ಷಕರ ವಿರುದ್ಧ ಕ್ರಮಕ್ಕೆ ಆಗ್ರಹಿ ಸಿದ್ದರು. ದೂರು ಸಲಿಸಿದ ಮರುದಿನ ಅಂದರೆ  ನಾಲ್ಕು ಜನ ಶಿಕ್ಷಕರಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ನೋಟಿಸ್ ಜಾರಿ ಮಾಡಿದ್ದಾರೆ.

ಬೀದರ ಜಿಲ್ಲೆಯ ಔರಾದ ಬಿ ತಾಲೂಕಿನಲ್ಲಿ ಅಕ್ಟೋಬರ್​ 7 ಮತ್ತು 13 ರಂದು ನಡೆದ ಆರ್​​ಎಸ್​​​ಎಸ್​ ಪಥಸಂಚ ಲನದಲ್ಲಿ ತಾವುಗಳು ಭಾಗಿಯಾಗಿರುತ್ತಿರಿ. ಈ ಕುರಿತು ವಿಡಿಯೋ ಮತ್ತು ಭಾವಚಿತ್ರಗಳು ಸಾಮಾಜಿಕ ಜಾಲ ತಾಣದಲ್ಲಿ ವ್ಯಾಪಕವಾಗಿ ಹರಿದಾಡಿದಿರುವ ದೃಶ್ಯಗಳು ಕಂಡು ಬಂದಿರುತ್ತವೆ.

ತಾವುಗಳು ಸರಕಾರಿ ನೌಕರರು ಆಗಿರುವುದರಿಂದ ಯಾವುದೇ ಪ್ರಕಾರ ರಾಜಕೀಯ ಮತ್ತು ಧಾರ್ಮಿಕ ಚಟುವಟಿಕೆಯಲ್ಲಿ ಭಾಗವಹಿಸುವಂತಿಲ್ಲ. ತಾವುಗಳು ಆರ್​​ಎಸ್​​​ಎಸ್​ ಪಥಸಂಚಲನದಲ್ಲಿ ಭಾಗವಹಿಸಿ ಸರಕಾರದ ಸೇವಾ ನಿಬಂಧನೆಗೆ ವಿರುದ್ದವಾಗಿ ಕರ್ತವ್ಯ ಮಾಡಿರುವಿರಿ.

ಈ ಪ್ರಯುಕ್ತ ತಾವುಗಳು ಈ ನೋಟಿಸ್ ತಲುಪಿದ ಬಳಿಕ ಕಾರಣ ಕೇಳುವ ನೋಟಿಸ್‌ಗೆ ಲಿಖಿತ ಹೇಳಿಕೆ ಯನ್ನು ನೀಡಿ ಖುದ್ದಾಗಿ ಬಂದು ಈ ಕಛೇರಿಗೆ ಸಲ್ಲಿಸುವುದು. ಇಲ್ಲವಾದಲ್ಲಿ ಏಕಪಕ್ಷಿಯವಾಗಿ ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ. ನಿಯಂಕ್ರಣ ಮತ್ತು ಮೇಲ್ಮನವಿ) ನಿಯಮಗಳು-1957ರನ್ವಯ ಮುಂದಿನ ಕ್ರಮ ತೆಗೆದುಕೊಳ್ಳಲಾಗುದೆಂದು ನೋಟಿಸ್​ನಲ್ಲಿ ಉಲ್ಲೇಖಿಸಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೀದರ್……

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.