ಲೋಕಾಯುಕ್ತ ಬಲೆಗೆ ಬಿದ್ದ DC – 2೦ ಸಾವಿರ ತಗೆದುಕೊಳ್ಳುವಾಗ ಟ್ರ್ಯಾಪ್ ಆದ ಅಧಿಕಾರಿ…..

Suddi Sante Desk
ಲೋಕಾಯುಕ್ತ ಬಲೆಗೆ ಬಿದ್ದ DC – 2೦ ಸಾವಿರ ತಗೆದುಕೊಳ್ಳುವಾಗ ಟ್ರ್ಯಾಪ್ ಆದ ಅಧಿಕಾರಿ…..

ಹೊಸಪೇಟೆ ವಿಜಯನಗರ –

ಕರ್ತವ್ಯ ಲೋಪ ಪ್ರಕರಣವೊಂದಕ್ಕೆ ಸಂಬಂಧಿಸಿ ದಂತೆ ಬಸ್‌ ನಿರ್ವಾಹಕರೊಬ್ಬರಿಂದ ₹20 ಸಾವಿರ ಲಂಚ ಪಡೆಯುತ್ತಿದ್ದಾಗ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ (ಕೆಕೆಆರ್‌ಟಿಸಿ) ವಿಭಾಗೀಯ ನಿಯಂತ್ರಣಾಧಿಕಾರಿ (ಡಿ.ಸಿ) ವಿ.ಎಸ್‌.ಜಗದೀಶ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಇಲಾಖಾ ವಿಚಾರಣೆಯನ್ನು ಕೈಬಿಡಲು ಡಿ.ಸಿ ಅವರು ₹25 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಈ ಪೈಕಿ ₹5 ಸಾವಿರ ಮುಂಗಡವಾಗಿ ಪಡೆದಿದ್ದರು. ಉಳಿದ ₹20 ಸಾವಿರವನ್ನು ಇಲ್ಲಿನ ಕೆಕೆಆರ್‌ಟಿಸಿ ಬಸ್‌ ನಿಲ್ದಾಣದ ಮೊದಲ ಮಹಡಿಯಲ್ಲಿರುವ ತಮ್ಮ ಕಚೇರಿಯಲ್ಲಿ ಪಡೆಯುತ್ತಿದ್ದಾಗ ಲೋಕಾ ಯುಕ್ತ ಪೊಲೀಸರ ದಾಳಿ ನಡೆಯಿತು.

ನಗದು ಸಮೇತ ಡಿ.ಸಿ ಸಿಕ್ಕಿಬಿದ್ದಿದ್ದು  ಬಳ್ಳಾರಿ ಲೋಕಾಯುಕ್ತ ಎಸ್‌ಪಿ ಸಿದ್ದರಾಜು ನೇತೃತ್ವದಲ್ಲಿ ಈ ಒಂದು ಕಾರ್ಯಾಚರಣೆ ನಡೆದಿದ್ದು ತನಿಖೆ ಮಾಡಲಾಗುತ್ತಿದೆ.

ಸುದ್ದಿ ಸಂತೆ ನ್ಯೂಸ್ ಹೊಸಪೇಟೆ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.