ಹಟ್ಟಿಚಿನ್ನದಗಣಿ –
ಹೌದು ಹಟ್ಟಿ ಚಿನ್ನದಗಣಿಯ ಹಳೆ ಪಂಚಾಯಿತಿ ಬಳಿಯ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳ ಪಾಲಕರು ಹಾಗೂ ಶಿಕ್ಷಕರ ಮಧ್ಯೆ ವಾಗ್ವಾದ ನಡೆಯಿತು.ಮುಖ್ಯಶಿಕ್ಷಕ ಹಾಗೂ ಸಿಬ್ಬಂದಿ ಕರ್ತವ್ಯಕ್ಕೆ ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ.ಈ ಸಂಬಂಧ ಮುಖ್ಯ. ಶಿಕ್ಷಕರನ್ನು ಪ್ರಶ್ನಿಸಿದರೆ ಕೇಳಲು ನೀವ್ಯಾರು ಎಂದು ಪ್ರಶ್ನಿಸು ತ್ತಾರೆ.ಶಿಕ್ಷಕರ ವಿರುದ್ಧ ಮೇಲಧಿಕಾರಿಗಳು ಕ್ರಮ ಕೈಗೊಳ್ಳ ಬೇಕು ಎಂದು ಪಾಲಕರು ಪಟ್ಟು ಹಿಡಿದರು.
ಪಾಠ ಮಾಡಬೇಕಾದ ಶಿಕ್ಷಕರು ಮೊಬೈಲ್ ನೋಡಿಕೊಂಡು ಕುಳಿತು ಕೊಳ್ಳುತ್ತಾರೆ.ಏನಾದರೂ ಕೇಳಿದರೆ ನಮ್ಮನ್ನೇ ಗದರಿಸುತ್ತಾರೆ.ಇದರಿಂದ ನಮ್ಮ ಕಲಿಕೆಗೆ ಹಿನ್ನೆಡೆಯಾಗು ತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇದೆ.ಇಲ್ಲಿನ ಮುಖ್ಯಶಿಕ್ಷಕ ಹಾಗೂ ಶಿಕ್ಷಕರು ಸೇರಿಕೊಂಡು ಹೆಚ್ಚಿನ ಹಾಜರಾತಿ ತೋರಿಸಿ ಸರ್ಕಾರಕ್ಕೆ ಮೋಸ ಮಾಡುತ್ತಿದ್ದಾರೆ.15 ವರ್ಷಗಳಿಂದ ಒಂದೇ ಶಾಲೆಯಲ್ಲಿ ಠಿಕಾಣಿ ಹೂಡಿರುವ ಶಿಕ್ಷಕ ಹಾಗೂ ಮುಖ್ಯಶಿಕ್ಷಕರನ್ನು ವರ್ಗಾವಣೆ ಮಾಡಬೇಕು.ಇಲ್ಲದಿದ್ದರೆ ಶಾಲೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಮೌನುದ್ದೀನ್ ಎಚ್ಚರಿಕೆ ನೀಡಿದರು
ಶಿಕ್ಷಣ ಇಲಾಖೆಯ ಮೇಲಾಧಿಕಾರಿಗಳು ಶಾಲೆಗೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು ಇನ್ನೂ ವಿಷಯ ತಿಳಿದು ಶಾಲೆಗೆ ಭೇಟಿ ನೀಡಿದ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಚಂದ್ರಶೇಖರ ಪಾಲಕರೊಂದಿಗೆ ಚರ್ಚಿಸಿದರು.ಬಳಿಕ ಮಾತನಾಡಿ ಶಾಲೆಯಲ್ಲಿನ ಸಮಸ್ಯೆ ಗಳ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತಂದು ಶಿಕ್ಷಕರ ವಿರುದ್ಧ ಕ್ರಮಕ್ಕೆ ಮುಂದಾಗಲಾಗುವುದು ಎಂದು ಮಾಹಿತಿ ನೀಡಿದರು.ಬಳಿಕ ಪಾಲಕರು ಮನೆಗಳಿಗೆ ತೆರಳಿದರು.