ಖರೀದಿಸಲು ಮೂರು ದಿನ ಅವಕಾಶ – ಸಮಯದಲ್ಲೂ ಕೂಡಾ ಬದಲಾವಣೆ – ಜಿಲ್ಲಾಧಿಕಾರಿಗಳ ಆದೇಶ…..

Suddi Sante Desk

ಧಾರವಾಡ –

ಕೊರೊನಾ ನಿಯಂತ್ರಿಸಲು ಕಠಿಣ ಲಾಕ್‌ಡೌನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಜನತೆಗೆ ಕಿರಾಣಿ ಮಾಂಸದ ಪದಾರ್ಥಗಳನ್ನು ಪೂರೈಸಲು ಮೇ.27 ಗುರುವಾರ ಮೇ.28 ಶುಕ್ರವಾರ ಹಾಗೂ ಮೇ.29 ಶನಿವಾರ ಈ ಮೂರು ದಿನಗಳ ಕಾಲ ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ ಹೇಳಿದರು

ಹೆಚ್ಚು ಜನದಟ್ಟಣೆಯಾಗಬಾರದು ಎಂಬ ಉದ್ದೇಶ ದಿಂದ ಕಿರಾಣಿ ಹಾಗೂ ಮಾಂಸ ಮಾರಾಟದ ಸಮ ಯದ ಅವಧಿ ವಿಸ್ತರಿಸಲಾಗಿದೆ. ಹುಬ್ಬಳ್ಳಿ ಹಾಗೂ ಧಾರವಾಡದ ಕಿರಾಣಿ ವರ್ತಕರೊಂದಿಗೆ ಚರ್ಚಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ.ಜನರು ಏಕಕಾಲಕ್ಕೆ ಅಂಗಡಿಗಳ ಮುಂದೆ ಜನಸಂದಣಿ ಉಂಟು ಮಾಡ ದೇ ಪ್ರತ್ಯೇಕವಾಗಿ ಬಂದು ಕೋವಿಡ್ ಸುರಕ್ಷತಾ ಕ್ರಮಗಳೊಂದಿಗೆ ಕಿರಾಣಿ ಮಾಂಸದ ಪದಾರ್ಥ ಗಳನ್ನು ಖರೀದಿಸಬೇಕು.ಈ ಮೂರು ದಿನಗಳ ಅವಕಾಶದ ನಂತರ ಕಠಿಣ ಲಾಕ್‌ಡೌನ್ ಅವಧಿ ಪೂರ್ಣಗೊಂಡ ಬಳಿಕ ಜೂನ್ 7 ರ ನಂತರವೇ ಈ ವಸ್ತುಗಳು ದೊರೆಯಲಿವೆ. ತರಕಾರಿ ಮತ್ತು ಹಾಲು ಮಾರಾಟಕ್ಕೆ ಪ್ರತಿದಿನ ಬೆಳಿಗ್ಗೆ 6 ರಿಂದ 8 ರವರೆಗೆ ಅವಕಾಶ ಇರುವುದರಿಂದ ಇವುಗಳ ಪೂರೈಕೆ ಎಂದಿ ನಂತೆಯೇ ಇರುತ್ತದೆ.ಇವುಗಳ ಸಮಯದಲ್ಲಿ ಬದ ಲಾವಣೆಯಿಲ್ಲ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.