ಬೆಂಗಳೂರು –
ಗೌರಿ ಗಣೇಶ ಚತುರ್ಥಿ ಹಿನ್ನಲೆಯಲ್ಲಿ ಪೊಲೀಸರು ರೌಡಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಹೌದು ಬೆಂಗಳೂರಿನ ಪಶ್ಚಿಮ ವಿಭಾಗದ ಪೊಲೀಸರು ಇಂದು ಬೆಳಗ್ಗೆ ರೌಡಿಗಳ ಪರೇಡ್ ನಡೆಸಿ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.ಪಶ್ಚಿಮ ವಿಭಾಗದ ಆಯಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿನ ರೌಡಿಗಳ ಮನೆಗಳ ಮೇಲೆ ಪೊಲೀಸರು ಇಂದು ಬೆಳಗ್ಗೆ 6 ರಿಂದ 9 ಗಂಟೆವರೆಗೆ ದಾಳಿ ಮಾಡಿ ರೌಡಿಗಳನ್ನು ಠಾಣೆಗೆ ಕರೆತಂದು ನಗರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕದಡದಂತೆ ತಾಕೀತು ಮಾಡಿದರು.
ರೌಡಿಗಳು ಪ್ರಸ್ತುತ ಮಾಡುತ್ತಿರುವ ಕೆಲಸ ವಾಸಸ್ಥ ಳದ ವಿಳಾಸ, ಖಾಯಂ ವಿಳಾಸ, ಮೊಬೈಲ್ ನಂಬರ್ ನ್ನು ಪೊಲೀಸರು ಪಡೆದುಕೊಂಡರು. ಗೌರಿ-ಗಣೇಶ ಹಬ್ಬದ ನಿಮಿತ್ತ ರೌಡಿಗಳ ಪರೇಡ್ ನಡೆಸಿ ಹಬ್ಬದ ಹಿನ್ನೆಲೆಯಲ್ಲಿ ಬಾಲ ಬಿಚ್ಚದಂತೆ ತಾಕೀತು ಮಾಡಿ ಕಳುಹಿಸಿದರು.