This is the title of the web page
This is the title of the web page

Live Stream

[ytplayer id=’1198′]

April 2025
T F S S M T W
 12
3456789
10111213141516
17181920212223
24252627282930

| Latest Version 8.0.1 |

State News

25 ಲಕ್ಷ ರೂಪಾಯಿ ಗೆದ್ದ ವ್ಯಾಪಾರಿ ಅಪಹರಿಸಿ 15 ಲಕ್ಷ ರೂಪಾಯಿ ಸುಲಿಗೆ – ಆರೋಪಿಗಳ ಬಂಧನಕ್ಕೆ ಜಾಲ ಬೀಸಿದ ಪೊಲೀಸರು…..

25 ಲಕ್ಷ ರೂಪಾಯಿ ಗೆದ್ದ ವ್ಯಾಪಾರಿ ಅಪಹರಿಸಿ 15 ಲಕ್ಷ ರೂಪಾಯಿ ಸುಲಿಗೆ – ಆರೋಪಿಗಳ ಬಂಧನಕ್ಕೆ ಜಾಲ ಬೀಸಿದ ಪೊಲೀಸರು…..
WhatsApp Group Join Now
Telegram Group Join Now

ಬೆಂಗಳೂರು

25 ಲಕ್ಷ ಗೆದ್ದಿದ್ದ ಟೀ ವ್ಯಾಪಾರಿಯನ್ನು ಅಪಹರಿಸಿ 15 ಲಕ್ಷ ಸುಲಿಗೆ ಮಾಡಿದ ಪರಿಚಿತರು ಹೌದು ಇಂತಹದೊಂದು ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಗೋವಾದ ಕ್ಯಾಸಿನೋದಲ್ಲಿ 25 ಲಕ್ಷ ರೂ. ಗೆದ್ದು ನಗರಕ್ಕೆ ಬಂದಿದ್ದ ಟೀ ವ್ಯಾಪಾರಿ.

ಮಾರಾಟಗಾರನನ್ನು ಪರಿಚಿತರೇ ಅಪಹರಿಸಿ 15 ಲಕ್ಷ ರೂ. ಲಪಟಾಯಿಸಿದ್ದಾರೆ.ಶ್ರೀನಗರದ ನಿವಾಸಿ ತಿಲಕ್‌ ಮಣಿಕಂಠ (32) ಅಪಹರಣಕ್ಕೆ ಒಳಗಾದವಬಾಗಿದ್ದು ಆತ ನೀಡಿದ ದೂರಿನ ಮೇರೆಗೆ ಐವರು ಅಪಹರಣಕಾರರ ವಿರುದ್ಧ ಹನುಮಂತನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ.ಹಲವು ವರ್ಷಗಳಿಂದ ನಗರ ದಲ್ಲಿ ಟೀ ವ್ಯಾಪಾರ ಮಾಡುತ್ತಿದ್ದ ತಿಲಕ್‌ ಗೋವಾಕ್ಕೆ ತೆರಳಿ ಅಲ್ಲಿ ಕ್ಯಾಸಿನೊ ಆಡಿ ದುಡ್ಡು ಮಾಡಲು ಮುಂದಾಗಿದ್ದ.

ಇದರಂತೆ 4 ಲಕ್ಷ ರೂ.ಹಣ ಹೊಂದಿಸಿಕೊಂಡು ಸ್ನೇಹಿತರೊಂದಿಗೆ ಜು.30ರಂದು ಬೆಂಗಳೂರಿ ನಿಂದ ಪಣಜಿಗೆ ವಿಮಾನದ ಮೂಲಕ ಹೋಗಿದ್ದ ಮೂರು-ನಾಲ್ಕು ದಿನ ಅಲ್ಲೇ ಉಳಿದು ಅಲ್ಲಿನ ಕ್ಯಾಸಿನೋದಲ್ಲಿ ಜೂಜಾಡಿ 25 ಲಕ್ಷ ರೂ. ಗೆದಿದ್ದ.

25 ಲಕ್ಷ ರೂ. ಹಣ ಗೆದ್ದ ವಿಚಾರ ಮನೆಯವರು ಹಾಗೂ ಸ್ನೇಹಿತರೊಂದಿಗೆ ಹಂಚಿಕೊಂಡಿದ್ದ. ಆ.5 ರಂದು ಕಾರಿನಲ್ಲಿ ಬಂದಿದ್ದ ಪರಿಚಿತರು ತಿಲಕ್‌ ನನ್ನು ಕಾರಿನಲ್ಲಿ ಬಲವಂತವಾಗಿ ಕೂರಿಸಿ ಅಪಹ ರಿಸಿದ್ದಾರೆ.ಜ್ಞಾನಭಾರತಿ ವಿವಿ ಬಳಿ ನಿರ್ಜನ ಪ್ರದೇಶದಲ್ಲಿ ಕರೆದೊಯ್ದು ಇಸ್ಟೀಟ್‌ ಆಟದ ಬಗ್ಗೆ ಕ್ಯಾತೆ ತೆಗೆದು ಜಗಳ ಮಾಡಿದ್ದಾರೆ.ಬಳಿಕ ಗೋವಾದ ಕ್ಯಾಸಿನೋದಲ್ಲಿ 25 ಲಕ್ಷ ರೂ. ಗೆದ್ದಿರುವ ವಿಚಾರ ನಮಗೆ ಗೊತ್ತಿದೆ ಎಂದು ಹೇಳಿ ದುಡ್ಡಿಗೆ ಬೇಡಿಕೆಯಿಟ್ಟಿದ್ದಾರೆ.

ಬಳಿಕ ಮೊಬೈಲ್‌ ಕಸಿದುಕೊಂಡು ಬ್ಯಾಂಕ್‌ ಖಾತೆ ಪರಿಶೀಲಿಸಿದಾಗ 25 ಲಕ್ಷ ರೂ. ಇರುವುದು ಗೊತ್ತಾಗಿದೆ.25 ಲಕ್ಷ ರೂ.ನಲ್ಲಿ 15 ಲಕ್ಷ ರೂ. ಅನ್ನು ತಿಲಕ್‌ಗೆ ಬೆದರಿಸಿ ತಮ್ಮ ಬ್ಯಾಂಕ್‌ ಖಾತೆ ಗಳಿಗೆ ಹಣ ವರ್ಗಾಯಿಸಿಕೊಂಡಿದ್ದರು.

ಬಳಿಕ ನೆಲಮಂಗಲ ಗೊಲ್ಲಹಳ್ಳಿ ಬಳಿಯಿರುವ ರೆಸಾರ್ಟ್‌ಗೆ ತಿಲಕ್‌ನನ್ನು ಕರೆದೊಯ್ದು ಕೊಠಡಿ ಯೊಂದರಲ್ಲಿ ಕೂಡಿ ಹಾಕಿದ್ದಾರೆ.ಇಷ್ಟಕ್ಕೆ ಸುಮ್ಮನಾಗದ ಅಪಹರಣಕಾರರು, ನಮ್ಮಿಂದ ಇಸ್ಟೀಟ್‌ ಮೋಸದಾಟದಲ್ಲಿ ಗೆದ್ದಿರುವ ದುಡ್ಡು ಇದು.

ಹೀಗಾಗಿ ಹಣ ವರ್ಗಾವಣೆ ಮಾಡಿಸಿಕೊಂಡಿದ್ದೇವೆ ಎಂದು ಹೇಳಿಸಿ ಮೊಬೈಲ್‌ನಲ್ಲಿ ವಿಡಿಯೋ ಮಾಡಿಸಿಕೊಂಡಿದ್ದರ ಬೆಂಗಳೂರು ಸಮೀಪ ತಿಲಕ್‌ನನ್ನು ಬಿಟ್ಟು ಪರಾರಿಯಾಗಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk