ಆರಂಭಗೊಂಡಿತು ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಪ್ರಕ್ರಿಯೆ ಶಿಕ್ಷಕರು ಕೂಡಾ ರಾಜ್ಯ ಸರ್ಕಾರಿ ನೌಕರರಾದರೂ ಇವರಿಗೊಂದು ನಿಯಮಗಳು ಬೇರೆ…..

Suddi Sante Desk

ಬೆಂಗಳೂರು –

ರಾಜ್ಯದ ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆ ಅದೇಶ ಹೊರ ಬಿದ್ದಿದೆ.ಹೌದು ಶೇ.6ರಷ್ಟು ಮೀರದಂತೆ ರಾಜ್ಯದ ಸರ್ಕಾರಿ ನೌಕರರ ವರ್ಗಾವಣೆಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.ಇದರ ಜೊತೆ ಜೊತೆಗೆ ವರ್ಗಾವಣೆಯ ಹೊಣೆಗಾರಿಕೆಯನ್ನು ಆಯಾ ಇಲಾಖಾ ಸಚಿವರಿಗೆ ನೀಡಿ ಆದೇಶಿಸಿದೆ.ಈ ಬಗ್ಗೆ ರಾಜ್ಯದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದಾರೆ.

ಸರ್ಕಾರಿ ನೌಕರರ ವರ್ಗಾವಣೆ ಕುರಿತಂತೆ ವಿಸ್ತೃತವಾದ ಮಾರ್ಗಸೂಚಿಗಳನ್ನು ನೀಡಲಾಗಿದೆ.ಮಾರ್ಗಸೂಚಿಗಳ ಪ್ರಕಾರ ಸರ್ಕಾರಿ ನೌಕರರ ವರ್ಗಾವಣೆಗಳನ್ನು ಪ್ರತಿ ವರ್ಷ ಮೇ ಮತ್ತು ಜೂನ್ ತಿಂಗಳುಗಳಲ್ಲಿ ಮಾತ್ರ ಷರತ್ತುಗಳಿಗೆ ಒಳಪಟ್ಟು ಮಾಡಬಹುದಾಗಿದೆ.

2022-23ನೇ ಸಾಲಿಗೆ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್ ಸಿ ಮತ್ತು ಗ್ರೂಪ್-ಡಿ ವರ್ಗದ ಅಧಿಕಾರಿ,ನೌಕರರಿಗೆ ಅನ್ವಯ ವಾಗುವಂತೆ ಒಂದು ಜೇಷ್ಠತಾ ಘಟದಲ್ಲಿ ಕಾರ್ಯನಿರತ ವೃಂದ ಬಲದ ಶೇ.6 ನ್ನು ಮೀರದಂತೆ ಸಾರ್ವತ್ರಿಕ ವರ್ಗಾ ವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಿಸಲಾಗಿದೆ ಎಂದು ತಿಳಿಸಿದ್ದಾರೆ.

ಶೇ.6ರಷ್ಟು ಗ್ರೂಪ್-ಎ, ಬಿ, ಸಿ ಮತ್ತು ಡಿ ವರ್ಗದ ಅಧಿಕಾರಿ, ನೌಕರಿಗೆ ಅನ್ವಯವಾಗುವಂತೆ ದಿನಾಂಕ 01-05-2022ರಿಂದ ದಿನಾಂಕ 15-06-2022ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.