ಮಳೆಯಲ್ಲಿಯೇ ಧಾರವಾಡ ದಲ್ಲಿ ಆರಂಭಗೊಡ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಮಾವಿನಕೊಪ್ಪ ಗ್ರಾಮದಲ್ಲಿ ತಹಶಿಲ್ದಾರ ಸಂತೋಷ ಹಿರೇಮಠ ಕಾರ್ಯಕ್ರಮ…..

Suddi Sante Desk

ಧಾರವಾಡ –

ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ವಿಶೇಷ ಕಾರ್ಯಕ್ರಮ ಧಾರವಾಡ ಜಿಲ್ಲೆಯಲ್ಲೂ ಆರಂಭಗೊಂಡಿತು.ಹೌದು ಧಾರವಾಡ ತಾಲೂಕಿನ ಮಾವಿನಕೊಪ್ಪ ಗ್ರಾಮದಲ್ಲಿ ಇಂದು ತಹಶೀಲ್ದಾರ ಸಂತೋಷ ಹಿರೇಮಠ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಜರುಗಿತು.

ಈ ಸಂದರ್ಭದಲ್ಲಿ ಅವರು ಅಧಿಕಾರಿಗಳು ಮತ್ತು ಗ್ರಾಮ ಸ್ಥರೊಂದಿಗೆ ಗ್ರಾಮದ ವಿವಿಧ ಓಣಿಗಳಿಗೆ ತೆರಳಿ ಮೂಲ ಸೌಕರ್ಯ ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು.ತಹಶಿಲ್ದಾರ ಅವರೊಂದಿಗೆ ಉಪ ತಹಶಿಲ್ದಾರ ಶಿವಾನಂದ ಹೆಬ್ಬಳ್ಳಿ ಸೇರಿದಂತೆ ಕಚೇರಿಯ ಸಿಬ್ಬಂದಿ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.