ಬಿಸಿಯೂಟ ಕಾರ್ಯಕರ್ತರ ಪ್ರತಿಭಟನೆ – ಸರ್ಕಾರದ ನಿರ್ಧಾರ ದಿಂದ ಸಿಡಿದೆದ್ದ ಅಡುಗೆ ತಯಾರಕರು…..

Suddi Sante Desk

ಬೆಂಗಳೂರು –

ಬಿಸಿಯೂಟ ತಯಾರಕರು ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ‌ ಹೌದು 60 ವಯಸ್ಸು ಮೇಲ್ಪಟ್ಟವರನ್ನು ನಿವೃತ್ತಿ ಮಾಡುವ ಆದೇಶ ಕುರಿತು ಈಗ ಅಕ್ಷರ ದಾಸೋಹ ನೌಕರ ಸಂಘದ ನೇತೃತ್ವದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಕಚೇರಿ ಮುಂದೆ ಬಿಸಿಯೂಟ ಕಾರ್ಯ ಕರ್ತರ ಹೋರಾಟ ಅರಂಭ ಮಾಡಿದ್ದಾರೆ

ಹೌದು 60 ವರ್ಷದ ಮೇಲ್ಪಟ್ಟ ಬಿಸಿಯೂಟ ಕಾರ್ಯಕ ರ್ತರ ನಿವೃತ್ತಿ ಆದೇಶ ವಿರುದ್ದ ಧರಣಿ ಮಾಡಿದರು 2001 02 ರಲ್ಲಿ ಅಡುಗೆ ಕೆಲಸಕ್ಕೆ ಸೇರ್ಪಡೆ ವೇಳೆ ವಿದ್ಯಾಭ್ಯಾಸ ಹಾಗೂ ವಯಸ್ಸಿನ ಅರ್ಹತೆ ಮಾತ್ರ ಇತ್ತು.ಅದರಲ್ಲಿ ನಿವೃತ್ತಿ ವಯಸ್ಸಿನ ಕೈಪಿಡಿ ಇರಲಿಲ್ಲ.ನಿವೃತ್ತಿ ಹೆಸರಲ್ಲಿ ಅಮಾನವೀ ಯವಾಗಿ ಬಿಡುಗಡೆ ಮಾಡ್ತಿದ್ದಾರೆ.12,000 ನೌಕರರ ಕೆಲಸ ವನ್ನು ಯಾವುದೇ ನಿವೃತ್ತಿ ಸೌಲಭ್ಯ ಇಲ್ಲದೆ ತೆಗೆದುಹಾಕಲು ಮುಂದಾಗಿದೆ.ಹೀಗಾಗಿ ಈ ಆದೇಶವನ್ನು ಸರ್ಕಾರ ಕೂಡಲೇ ವಾಪಸ್ ಪಡೆಯಬೇಕು.ಇಲ್ಲದಿದ್ರೆ ನೀವು ನಿವೃತ್ತಿ ನಿಗದಿ ಮಾಡಿದ್ರೆ ನೌಕರರಿಗೆ ನಿವೃತ್ತಿ ವೇತನ 1 ಲಕ್ಷ ಕೊಡ ಬೇಕೆಂದು ಒತ್ತಾಯಿಸಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.