ಬ್ಲ್ಯಾಕ್ ಮೇಲ್ ಮಾಡಿದವರಿಗೆ ಹಣ ಕೊಟ್ಟವರು ಯಾರು – ಹುಟ್ಟಿಕೊಂಡಿದೆ ಯಕ್ಷ ಪ್ರಶ್ನೆ – ಅವರಾ ಇವರಾ…..!!!!!

Suddi Sante Desk

ಬೆಂಗಳೂರು –

ಅಶ್ಲೀಲ ಸಿಡಿ ವಿಚಾರ ಕುರಿತು ತನಿಖೆ ಆರಂಭ ಮಾಡಿರುವ SIT ಅಧಿಕಾರಿಗಳಿಗೆ ದಿನಕ್ಕೊಂದು ಮಾಹಿತಿ ಹೊಸ ಹೊಸ ವಿಚಾರಗಳು ಸಿಗುತ್ತಿವೆ. ಇನ್ನೂ ಈ ಒಂದು ಸಿಡಿ ವಿಚಾರದಲ್ಲಿ ಎಲ್ಲರಿಗೂ ದೊಡ್ಡ ಪ್ರಶ್ನೆಯಾಗಿದ್ದು ಈವರೆಗೆ ಕಾಡತಾ ಇರೊದು ಹಣ ಕೊಟ್ಟವರು ಯಾರು‌. ಇದರ ಹಿಂದೆ ಯಾರಿ ದ್ದಾರೆ ಎಂಬ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಟ್ವಟ್ ಮಾಡಿದೆ.

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ಟ್ವೀಟ್ ಮಾಡಿದೆ. ಬ್ಲ್ಯಾಕ್ಮೇಲ್ ಮಾಡಿದವರಿಗೆ ಜಾರಕಿಹೊಳಿಯಿಂದ ಹಣ ಸಂದಾಯವಾಗಿದೆ ಎಂದು ವರದಿಯಾಗಿದೆ. ಇದಕ್ಕೆ ಹಣ ಖರ್ಚು ಮಾಡಿದ್ದು ಯಾರು? ಇಲ್ಲಿ ಹಣಕಾಸು ಅವ್ಯವಹಾರ ನಡೆದಿರಬೇಕಲ್ಲವೇ? ಇಡಿ, ಆದಾಯ ತೆರಿಗೆ ಇಲಾಖೆ ಗಳು ಏಕೆ ಕಣ್ಮುಚ್ಚಿ ಕೂತಿವೆ ? ತನಿಖಾ ಸಂಸ್ಥೆಗಳು ಇರುವುದು ಅಕ್ರಮ ತಡೆಯುವುದಕ್ಕಾ? ಅಥವಾ ಪ್ರತಿಪಕ್ಷಗಳ ಮೇಲೆ ದಾಳಿ ಮಾಡುವುದ ಕ್ಕಾ? ಎಂದು ಟ್ವೀಟ್ ಮೂಲಕ ಬಿಜೆಪಿಗೆ ಕಾಂಗ್ರೆಸ್ ಪ್ರಶ್ನೆ ಮಾಡಿದ್ದು ಇವೆಲ್ಲದರ ನಡುವೆ ಇನ್ನೂ ಏನೇನೂ ಬೆಳವಣಿಗೆ ಆಗುತ್ತದೆ ಎಂಬುದನ್ನು ಕಾದು ನೋಡಬೇಕು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.