This is the title of the web page
This is the title of the web page

Live Stream

[ytplayer id=’1198′]

May 2025
T F S S M T W
1234567
891011121314
15161718192021
22232425262728
293031  

| Latest Version 8.0.1 |

international News

ಸರ್ಕಾರಿ ಶಾಲಾ ಶಿಕ್ಷಕ ನಿಂದ ವಿದ್ಯಾರ್ಥಿ ನಿ ಅಪಹರಣ – ಕಿಡ್ನ್ಯಾಪ್ ಹಿಂದಿದೆ ಆ ಕಾರಣ…..

WhatsApp Group Join Now
Telegram Group Join Now

ಕೃಷ್ಣಗಿರಿ –

ಪಿಯು ವಿದ್ಯಾರ್ಥಿನಿಯನ್ನು ಅಪಹರಿಸಿದ ಘಟನೆ ತಮಿಳುನಾಡಿನ ಕೃಷ್ಣಗಿರಿ ಯಲ್ಲಿ ನಡೆದಿದೆ‌.ಮೂರ್ತಿ ಮತ್ತು ಕಾವ್ಯ ದಂಪತಿ ಕೃಷ್ಣಗಿರಿ ಜಿಲ್ಲೆಯ ಮಾಥೂರಿ ನ ಬಳಿಯಿರುವ ಜಿಂಜಂಪತಿಯ ನಿವಾಸಿಗಳು. ದಂಪತಿಗೆ 16 ವರ್ಷದ ಮಗಳಿದ್ದಾಳೆ. ಕೂಲಿಯನ್ನೇ ನಂಬಿರುವ ದಂಪತಿ ತಮ್ಮ ಮಗಳೊಂದಿಗೆ ತಿರುವ ಣ್ಣಮಲೈ ಜಿಲ್ಲೆಯ ಮೇಲ್ಸೆಂಗಮ್ನಲ್ಲಿ ಕೂಲಿಯಾಳು ಗಳಾಗಿ ಕೆಲಸ ಮಾಡುತ್ತಿದ್ದರು. ದಂಪತಿಯ ಮಗಳು ತಿರುವಣಮಲೈನ ಡ್ಯಾನಿಯಲ್ ಮಿಷನ್ ಸ್ಕೂಲ್ ನಲ್ಲಿ ಪ್ರಥಮ ವರ್ಷದ ಪಿಯು ವಿದ್ಯಾರ್ಥಿನಿಯಾಗಿ ದ್ದಾಳೆ. ಏಪ್ರಿಲ್ 6 ರಂದು ದಂಪತಿ ತನ್ನ ಮಗಳೊಂ ದಿಗೆ ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಮಾಡಲು ತವರಿಗೆ ತೆರಳು ತ್ತಾರೆ.ಅದೇ ದಿನ ಇದ್ದಕ್ಕಿದ್ದಂತೆ ಮಗಳು ಕಾಣೆಯಾ ಗುತ್ತಾಳೆ. ಸಾಕಷ್ಟು ಹುಡುಕಾಟ ನಡೆಸಿದರೂ ಮಗ ಳು ಸಿಗದಿದ್ದಾಗ ಗಾಬರಿಗೊಂಡ ದಂಪತಿ ಮಾಥೂ ರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುತ್ತಾ ರೆ.

ಪ್ರಕರಣ ದಾಖಲು ಮಾಡಿಕೊಂಡ ಪೊಲೀಸರಿಗೆ ಮಹತ್ವದ ಮಾಹಿತಿಯೊಂದು ಸಿಗುತ್ತದೆ. ವಿದ್ಯಾರ್ಥಿ ನಿಯನ್ನು ತಿರುವಣ್ಣಾಮಲೈ ಜಿಲ್ಲೆಯ ನಾಗನೂರು ಗ್ರಾಮದ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕ ಚರಣ್ರಾ ಜ್(31) ಆಕೆಯನ್ನು ಅಪಹರಿಸಿರುವುದು ತಿಳಿಯು ತ್ತದೆ. ಬಲವಂತವಾಗಿ ಮದುವೆ ಆಗುವ ಉದ್ದೇಶ ದಿಂದ ಕಿಡ್ನಾಪ್ ಮಾಡಿ ತನ್ನ ಮನೆಯಲ್ಲಿ ಇಟ್ಟುಕೊಂ ಡಿರುತ್ತಾನೆ. ಆತನ ಸುಳಿವು ಪಡೆದ ಪೊಲೀಸರು ಕಾರ್ಯಾಚರಣೆ ಮಾಡಿ ಬಂಧನ ಮಾಡುತ್ತಾರೆ‌. ವಿದ್ಯಾರ್ಥಿನಿಯನ್ನು ರಕ್ಷಿಸುತ್ತಾರೆ.ಇನ್ನೂ ಇದೇ ಒಂದು ಆರೋಪದ ಮೇಲೆ ಸರ್ಕಾರಿ ಶಾಲಾ ಶಿಕ್ಷಕ ರೊಬ್ಬರನ್ನು ತಮಿಳುನಾಡು ಪೊಲೀಸರು ಕೂಡಾ ಬಂಧಿಸಿದ್ದಾರೆ‌‌.ಅನೇಕ ದಿನಗಳಿಂದ ಮದುವೆ ಆಗ ದೇ ಉಳಿದಿದ್ದಕ್ಕೆ ವಿದ್ಯಾರ್ಥಿನಿಯ ಮೇಲೆ ಆಸೆಯಾ ಗಿ ಆಕೆಯನ್ನು ಕಿಡ್ನಾಪ್ ಮಾಡಿದ್ದಾಗಿ ಒಪ್ಪಿಕೊಂಡಿ ದ್ದಾನೆ


Google News

 

 

WhatsApp Group Join Now
Telegram Group Join Now
Suddi Sante Desk