ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ – ಕಳೆದ ನಾಲ್ಕು ವರ್ಷಗಳಿಂದ ಮೈಸೂರಿನಲ್ಲಿ ನಡೆಯುತ್ತಿದೆ ಅರ್ಥಪೂರ್ಣ ಕಾರ್ಯ…..

Suddi Sante Desk
ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ – ಕಳೆದ ನಾಲ್ಕು ವರ್ಷಗಳಿಂದ ಮೈಸೂರಿನಲ್ಲಿ ನಡೆಯುತ್ತಿದೆ ಅರ್ಥಪೂರ್ಣ ಕಾರ್ಯ…..

ಮೈಸೂರು

ಹೌದು ಮೈಸೂರು ಜಿಲ್ಲೆ ಟಿ ನರಸೀಪುರ ತಾಲೂಕಿನ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ 2023ನೇ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ ಕಾರ್ಯ ಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯ ಕ್ರಮದಲ್ಲಿ ಅಧ್ಯಕ್ಷತೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಗಳಾದ ಮರಿಸ್ವಾಮಿ ರವರು ವಹಿಸಿದ್ದರು.

ಇದೇ ವೇಳೆ ಮಾತನಾಡಿದ ಅವರು ತಾಲೂಕಿ ನಲ್ಲಿ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಉತ್ತಮವಾಗಿ ಕಾರ್ಯನಿರ್ವ ಹಿಸುತ್ತಿದೆ ಎಂದು ಶ್ಲಾಘಿಸಿದರು ಇದೇ ರೀತಿ ಇತರೆ ಸಂಘದವರು ಸಹಕಾರದಿಂದ ಒಟ್ಟಾಗಿ ಇರಬೇ ಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬಿ ಆರ್ ಸಿ ನಾಗೇಶ್ ರಾಜ್ಯ ಉಪಾಧ್ಯಕ್ಷರಾದ ಕೆ ನಾಗರಾಜು ಗ್ರಾಮೀಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಬಿ ಎಸ್ ಮಹೇಶ್ ಪ್ರಧಾನ ಕಾರ್ಯದರ್ಶಿಗಳಾದ ಸೋಮಶೇಖರ್ ಗೌರವ ಅಧ್ಯಕ್ಷರಾದ ಸಿದ್ದರಾಜು ಕೋಶಾಧ್ಯಕ್ಷ ರಾದ ಟಿ ಪಿ ರಮೇಶ್ ಎಂ ನಾಗೇಶ್ ಕುಮಾರ್,  ಜನಾರ್ದನ್ ರುದ್ರಸ್ವಾಮಿ ಎಚ್ ಡಿ ಮಾದಪ್ಪ ಸಿಆರ್ ಪಿ ನಾಗೇಶ್ ಎಂ ರಾಮ ಮಂಜುನಾಥ್ ಸುಬ್ಬಣ್ಣ ಧರ್ಮೇಂದ್ರ ಪ್ರಸಾದ್ ಸೂರ್ಯ ಕುಮಾರ್ ಸಿ ಆರ್ ಪಿ ನವೀನ್ ಹಾಗೂ ಗ್ರಾಮೀಣ ಶಿಕ್ಷಕರ ಸಂಘದ ಪದಾಧಿಕಾರಿಗಳು ಮತ್ತು ತಾಲೂಕಿನ ಶಿಕ್ಷಕರು ಹಾಜರಿದ್ದರು‌.

ಇನ್ನೂ ಕಳೆದ ನಾಲ್ಕು ವರ್ಷಗಳಿಂದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವನ್ನು ಎಲ್ಲಾ ಸಂಘಟನೆ ಗಳಿಂದ ಮೊದಲಾಗಿ ಗ್ರಾಮೀಣ ಶಿಕ್ಷಕರ ಸಂಘವು ಬಿಡುಗಡೆ ಮಾಡುತ್ತಿದೆ ಹಿಂದಿನ ವರ್ಷ ರಾಜ್ಯ ಮಟ್ಟದಲ್ಲಿ ಈ ಕ್ಯಾಲೆಂಡರ್ ಅನ್ನು ಬಸವರಾಜ ಹೊರಟ್ಟಿಸರಿಂದ ಬಿಡುಗಡೆ ಮಾಡಿಸಲಾಗಿತ್ತು ಎಂದು ಅಧ್ಯಕ್ಷರಾದ ಬಿಎಸ್ ಮಹೇಶ್ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಸಂಪೂರ್ಣವಾಗಿ ಯಶಸ್ವಿಯಾಗಬೇಕಾದರೆ ಪ್ರಧಾನ ಕಾರ್ಯದರ್ಶಿ ಗಳಾದ ಎಸ್ ಸೋಮಶೇಖರ್ ರವರ ಶ್ರಮ ಶ್ಲಾಘನೀಯವಾದದ್ದು ಎಂದು ಪದಾಧಿಕಾರಿಗಳು ಅಭಿನಂದಿಸಿದರು ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಂಪನ್ಮೂಲ ಸಮನ್ವಯ ಅಧಿಕಾರಿಗಳನ್ನು ಸಂಘದ ವತಿ ಯಿಂದ ಗೌರವ ಸಮರ್ಪಣೆ ಅರ್ಪಿಸಲಾಯಿತು

ಈ ಒಂದು ಕಾರ್ಯಕ್ರಮ ದಲ್ಲಿ ಶ್ರೀಯುತ ಮರಿಸ್ವಾಮಿ ಎಂ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶ್ರೀಯುತ ನಾಗೇಶ್ ಎನ್ (ಬಿ ಆರ್ ಸಿ) ಶ್ರೀಯುತ ಮಾದಪ್ಪ ಎಚ್ ಡಿ ಅಧ್ಯಕ್ಷರು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ,ಶ್ರೀಯುತ ಪುಟ್ಟಸ್ವಾಮಿಕುಪ್ಯ ಪ್ರಧಾನ ಕಾರ್ಯದರ್ಶಿಗಳು

ಸೋಸಲೆ ನಾಗೇಶ ಖಜಾಂಚಿಗಳು ಟಿ ಓ ಟಿ ನಾಗರಾಜ್ ರಾಜ್ಯ ಉಪಾಧ್ಯಕ್ಷರು ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬಿಎಸ್ ಮಹೇಶ್ ಅಧ್ಯಕ್ಷರು ಕರ್ನಾಟಕ ರಾಜ್ಯ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಟಿ.ನರಸೀಪುರ ಶಾಖೆ ಸೋಮಶೇಖರ್ ಎಸ್ ಪ್ರಧಾನ ಕಾರ್ಯದರ್ಶಿಗಳು ಕರ್ನಾಟಕ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸಿದ್ದರಾಜು ಗೌರವಾಧ್ಯಕ್ಷರು,ರಮೇಶ್ ಟಿ ಪಿ ಕೋಶಾಧ್ಯಕ್ಷರು ಕರ್ನಾಟಕ ರಾಜ್ಯ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ನಾಗೇಶ್ ಕುಮಾರ್ ಉಪಾಧ್ಯಕ್ಷರು ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜನಾರ್ಧನ್ ಆರ್ ಸಹ ಕಾರ್ಯದರ್ಶಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ರುದ್ರಸ್ವಾಮಿ ಸಂಘಟನಾ ಕಾರ್ಯದರ್ಶಿ ಮಂಜುನಾಥ್ ಎಂ ಕಾರ್ಯಕಾರಿ ಸಮಿತಿ ಸದಸ್ಯರು ಸುಬ್ಬಣ್ಣ ಟಿ ಎಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಮೈಸೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.