ಹಿರಿಯ ಪತ್ರಕರ್ತ ಡಾ.ಶಿವರಾಮ ಅಸುಂಡಿಯವರ ಕೃತಿಗಳ ಬಿಡುಗಡೆ – ಸಾಹಿತಿ ಸತೀಶ್ ಕುಲಕರ್ಣಿ ಸೇರಿದಂತೆ ಹಲವು ಗಣ್ಯ ರಿಂದ ಲೋಕಾರ್ಪಣೆ…..

Suddi Sante Desk

ಹುಬ್ಬಳ್ಳಿ –

ಪ್ರಗತಿ ಗ್ರಾಫಿಕ್ಸ್ ಬೆಂಗಳೂರು ಪ್ರಕಟಿಸಿದ ಹಿರಿಯ ಪತ್ರಕರ್ತರು ಹಾಗೂ ಸಾಹಿತಿಗಳಾದ ಡಾ.ಶಿವರಾಮ್ ಅಸುಂಡಿಯವರ ಕೋಣನ ಮುಂದೆ ಕಿನ್ನರಿ ಮತ್ತೆರಡು ನಾಟಕ ಹಾಗೂ ಚಿತ್ರಂ ಭಳಾರೆ ವಿಚಿತ್ರಂ ಕೃತಿಗಳನ್ನು ಹಿರಿಯ ಸಾಹಿತಿಗಳಾದ ಸತೀಶ ಕುಲಕರ್ಣಿ ಬಿಡುಗಡೆಗೊ ಳಿಸಿದರು.

ಹುಬ್ಬಳ್ಳಿಯ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯ ಕ್ರಮದಲ್ಲಿ ಬಿಡುಗಡೆಗೊಳಿಸಿ ಮಾತನಾಡಿದರು.ಬಳಿಕ ಮಾತನಾಡಿದ ಅವರು ಪತ್ರಿಕೋದ್ಯಮದ ಬ್ಯೂಸಿ ಬದುಕಿ ನಲ್ಲಿ ಇಂತಹದೊಂದು ಕಾರ್ಯಕ್ಕೆ ಕೈ ಹಾಕಿ ಸಾಹಿತ್ಯ ಕ್ಷೇತ್ರ ದಲ್ಲಿ ಕೃಷಿ ಮಾಡಿರುವುದು ನಿಜಕ್ಕೂ ಸ್ವಾಗತಾರ್ಹವಾಗಿದೆ ಎಂದರು.

ತಮ್ಮ ವೃತ್ತಿ ಬದುಕಿನಲ್ಲಿ ನಡೆಯುವ ಘಟನೆಗಳನ್ನು ಓದುಗರ ಮುಂದೆ ಇಡುವಂತ ಕಾರ್ಯಕ್ಕೆ ಡಾ.ಶಿವರಾಮ ಅಸುಂಡಿಯವರು ಮುಂದಾಗಿರುವುದು ನಿಜಕ್ಕೂ ಶ್ಲಾಘ ನೀಯ ಎಂದು ಅವರು ಅಭಿನಂದನೆ ಸಲ್ಲಿಸಿದರು.ಇನ್ನೂ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ಗಣಪತಿ ಗಂಗೊಳ್ಳಿ,ರಶ್ಮಿ.ಎಸ್.ಹಿರಿಯ ಸಾಹಿತಿಗಳಾದ ಮಹಾಂ ತಪ್ಪ ನಂದೂರ,ಡಾ.ಎಂ.ಬೈರೇಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದು ಕೃತಿ ಬಿಡುಗಡೆ ಕಾರ್ಯಕ್ರಮಕ್ಕೆ ಮೆರಗನ್ನು ನೀಡಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.