ಸುರಂಗದಲ್ಲಿ ಸಿಲುಕಿಕೊ‌ಂಡಿದ್ದ 16 ಕಾರ್ಮಿಕರ ರಕ್ಷಣೆ – ಮುಂದುವರಿದ ಕಾರ್ಯಾಚರಣೆ

Suddi Sante Desk

ಚಮೋಲಿ(ಉತ್ತರಾಖಂಡ)

ಚಮೋಲಿ ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ಹಿಮಪರ್ವತ ಕುಸಿದು ಡ್ಯಾಂ ಒಡೆದ ಪರಿಣಾಮ ಉಂಟಾದ ಅನಾಹುತಕ್ಕೆ 10 ಮಂದಿ ಬಲಿಯಾಗಿದ್ದು ಇದೇ ವೇಳೆ ಸುರಂಗದಲ್ಲಿ ಸಿಲುಕಿದ್ದ 16 ಮಂದಿಯನ್ನು ಐಟಿಬಿಪಿ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

ಹಿಮ ಪ್ರವಾಹದಲ್ಲಿ ಬರೋಬ್ಬರಿ 150 ಮಂದಿ ನಾಪತ್ತೆಯಾಗಿದ್ದು ಪ್ರಸ್ತುತ ಹತ್ತು ಮೃತದೇಹಗಳು ಸಿಕ್ಕಿರುವುದಾಗಿ ರಕ್ಷಣಾ ತಂಡಗಳು ತಿಳಿಸಿವೆ. ಉತ್ತರಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಘೋಷಿಸಿದ್ದಾರೆ. ಇದರ ಜೊತೆಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡಿ ರುವವರಿಗೆ ತಲಾ 50 ಸಾವಿರ ರುಪಾಯಿ ಪರಿಹಾರ ನೀಡುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಇವೆಲ್ಲದರ ನಡುವೆ ಚಮೋಲಿ ಜಿಲ್ಲೆಯ ತಪೋವನ ಪ್ರದೇಶದಲ್ಲಿರುವ ಸುರಂಗದಲ್ಲಿ ಸಿಲುಕಿದ್ದ 16 ಕಾರ್ಮಿಕರನ್ನು ಇಂಡೋ-ಟಿಬೆಟಿಯನ್ ಪೊಲೀಸರು ರಕ್ಷಿಸಿದ್ದು ಇನ್ನೂ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ‌‌

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.