ಶಾಲಾ ಮಕ್ಕಳನ್ನು ಮರಕ್ಕೆ ಕಟ್ಟಿ ಹಾಕಿ ಸಿಗರೇಟು ಸೇದಿಸಿದ ಪುಂಡರು – ರಾಜ್ಯವನ್ನೇ ಬೆಚ್ಚಿಬೀಳಿಸಿದ ಘಟನೆ…..

Suddi Sante Desk

ಬೆಂಗಳೂರು –

ಗಾಂಜಾ ಸೇವಿಸಿದ ಅಮಲಿನಲ್ಲಿ ಯುವಕರ ಗುಂಪೊಂದು ಶಾಲಾ ಮಕ್ಕಳನ್ನು ಮರಕ್ಕೆ ಕಟ್ಟಿ ಹಾಕಿದ್ದಲ್ಲದೇ ಅವರಿಗೆ ಸಿಗರೇಟ ಸೇದಿಸಿದ ಘಟನೆ ಬೆಂಗಳೂರಿನ ನಡೆದಿದೆ. ಕೆ ಆರ್ ಪುರಂನ ದೇವಸಂದ್ರ ವಾರ್ಡ್ ನಲ್ಲಿ ಈ ಒಂದು ಅಮಾನವೀಯ ಘಟನೆ ನಡೆದಿದೆ.ಸರ್ಕಾರಿ ಶಾಲಾ ಆವರಣದಲ್ಲಿ ಗಾಂಜಾ ಸೇವನೆ ಮಾಡಿದ ಯುವಕರು ಮಕ್ಕಳನ್ನು ಮರಕ್ಕೆ ಕಟ್ಟಿ ಬಲವಂತದಿಂದ ಸಿಗರೇಟ್ ಸೇದಿಸಿರುವುದಾಗಿ ಪೋಷಕರು ಆರೋಪಿಸಿದ್ದಾರೆ.

ಈ ಬಗ್ಗೆ ವಿದ್ಯಾರ್ಥಿಯ ಪೋಷಕರೋರ್ವರು,ಗಾಂಜಾ ಸೇವನೆಯ ಯುವಕರ ಗುಂಪೊಂದು ನಮ್ಮ ಮಕ್ಕಳಿಗೆ ಕೆಟ್ಟ ಬುದ್ದಿಗಳನ್ನು ಕಲಿಸಿಕೊಡುತ್ತಿದೆ.ಅವರಿಗೆ ಮದ್ಯ ಹಾಗೂ ಗ್ಲಾಸ್ ತಂದು ಕೊಡೋದಕ್ಕೆ ಬಳಸಿಕೊಳ್ಳುತ್ತಿದೆ. ಒಂದು ವೇಳೆ ಅವರ ಕೆಲಸ ಮಾಡದಿದ್ದರೆ,ಶಾಲೆಗೆ ತೆರಳಿ ಮಕ್ಕಳ ಮೇಲೆ ಹಲ್ಲೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ದ್ದಾರೆ.ಈ ಕುರಿತು ಪೊಲೀಸರಿಗೆ ದೂರು ನೀಡಲಾಗಿದ್ದು, ಪೊಲೀಸರು ಯುವಕರಿಗೆ ಬಂಧನಕ್ಕೆ ಬಲೆ ಬೀಸಿದ್ದು ದುರಂತದ ವಿಚಾರವಾಗಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.