ಆಸ್ತಿಗಾಗಿ ಅಪ್ಪನ ಕೊಲೆ ಮಾಡಿದ ಮಗ – ಆಸ್ತಿಗಾಗಿ ಸುಪಾರಿ ಕೊಟ್ಟ ಮಗ ನೊಂದಿಗೆ ಜೈಲು ಸೇರಿದ ಸೊಸೆ…..

Suddi Sante Desk
ಆಸ್ತಿಗಾಗಿ ಅಪ್ಪನ ಕೊಲೆ ಮಾಡಿದ ಮಗ – ಆಸ್ತಿಗಾಗಿ ಸುಪಾರಿ ಕೊಟ್ಟ ಮಗ ನೊಂದಿಗೆ ಜೈಲು ಸೇರಿದ ಸೊಸೆ…..

ಬಾಗಲಕೋಟೆ

ಆಸ್ತಿಗಾಗಿ ಅಪ್ಪನ ಕೊಲೆ ಮಾಡಿದ ಮಕ್ಕಳು ಸುಪಾರಿ ನೀಡಿ ಮಗನೊಂದಿಗೆ ಸೊಸೆ ಕೂಡಾ ಜೈಲು ಸೇರಿದ್ದಾರೆ ಹೌದು ಆಸ್ತಿಗಾಗಿ ಸುಪಾರಿ ಕೊಟ್ಟು ಅಪ್ಪನನ್ನೇ ಮಗ ಕೊಲೆ ಮಾಡಿರುವ ಘಟನೆ ಬಾಗಲಕೋಟೆಯ ತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ.

ಚೆನ್ನಪ್ಪ (66) ಕೊಲೆಯಾದ ಚನ್ನಬಸಪ್ಪ ಆಗಿದ್ದು  ಇನ್ನೂ ಕೊಲೆ ಮಾಡಿಸಿದ ಮಗ. ಮಾಂತೇಶ್ ಮರಡಿ ಮಠ ಕೊಲೆ ಮಾಡಿದ ಆರೋಪಿ ಎಂದು ತಿಳಿದು ಬಂದಿದೆ.37 ಎಕರೆ ಜಮೀನನ್ನು ಭಾಗ ಮಾಡುವ ವಿಚಾರಕ್ಕೆ ತಂದೆ ಮತ್ತು ಮಗನ ನಡುವೆ ಪದೆ ಪದೆ ಗಲಾಟೆ ನಡೆಯುತ್ತಿತ್ತು.

ಹೀಗಾಗಿ ಚನ್ನಬಸಪ್ಪ, ಪತ್ನಿ ಶಿವಬಸವ್ವ ಮತ್ತು ಚನ್ನಬಸಪ್ಪನ ಆಪ್ತ ರಮೇಶ್ ಮನಗೂಳಿ ಒಟ್ಟಿಗೆ ಸೇರಿ ಕೊಲೆ ಮಾಡಲು ಯೋಚನೆ ರೂಪಿಸಿದ್ದರು.
ನಂತರ ವಿಜಯಪುರ ಜಿಲ್ಲೆಯ ನಿಡಗುಂದಿ ಮೂಲದ ಮಾಂತೇಶ್ ಮರಡಿಮಠ ಎಂಬು  ವನಿಗೆ 3 ಲಕ್ಷ ರೂ. ನೀಡಿ ಚೆನ್ನಪ್ಪನನ್ನು ಕೊಲೆ ಮಾಡುವಂತೆ ಸುಫಾರಿ ನೀಡಿದ್ದಾರೆ.

ಸುಫಾರಿ ಪಡೆದ ಮಾಂತೇಶ್ ಮರಡಿಮಠ ಜನವರಿ 25ರ ರಾತ್ರಿ ರಾಂಪುರ ಗ್ರಾಮದ ಬಳಿ ಚೆನ್ನಪ್ಪನನ್ನು ಮಚ್ಚಿನಿಂದ ಕೊಚ್ಚಿ, ಕಲ್ಲಿನಿಂದ ತಲೆ ಜಜ್ಜಿ ಕೊಲೆ ಮಾಡಿದ್ದಾನೆ. ಪೊಲೀಸರ ತನಿಖೆ ನಡೆಸಿ ಕೊಲೆ ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ.

ಪ್ರಕರಣದ ಆರೋಪಿಗಳಾದ ಮಗ ಚನ್ನಬಸಪ್ಪ, ಸೊಸೆ ಶಿವಬಸವ್ವ ಸೇರಿದಂತೆ ನಾಲ್ವರನ್ನು ಪೊಲೀಸರು ಅರೆಸ್ಟ್ ಮಾಡಿದ್ದು ಮುಂದಿನ ಕ್ರಮ ವನ್ನು ಕೈಗೊಂಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬಾಗಲಕೋಟೆ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.