This is the title of the web page
This is the title of the web page

Live Stream

[ytplayer id=’1198′]

September 2025
T F S S M T W
 123
45678910
11121314151617
18192021222324
252627282930  

| Latest Version 8.0.1 |

State News

CM ಗೆ ಪತ್ರ ಬರೆದ ರಾಜ್ಯ ಸರ್ಕಾರಿ ನೌಕರರ ಸಂಘ – ರಾಜ್ಯದ ಸಮಸ್ತ ಸರ್ಕಾರಿ ನೌಕರರ ಕಷ್ಟಕ್ಕೆ ಧ್ವನಿಯಾದ ಸಂಘ CM ಗೆ ಮನವಿ ಮಾಡಿದ್ದೇನು ನೋಡಿ…..

CM ಗೆ ಪತ್ರ ಬರೆದ ರಾಜ್ಯ ಸರ್ಕಾರಿ ನೌಕರರ ಸಂಘ – ರಾಜ್ಯದ ಸಮಸ್ತ ಸರ್ಕಾರಿ ನೌಕರರ ಕಷ್ಟಕ್ಕೆ ಧ್ವನಿಯಾದ ಸಂಘ CM ಗೆ ಮನವಿ ಮಾಡಿದ್ದೇನು ನೋಡಿ…..
WhatsApp Group Join Now
Telegram Group Join Now

ಬೆಂಗಳೂರು –

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಮಾನ ಹೆಚ್ಚಾಗುತ್ತಿದ್ದು ಇದರಿಂದಾಗಿ ಜನ ಸಾಮಾನ್ಯರು ಪರದಾಡುತ್ತಿದ್ದು ಈ ಒಂದು ನಡುವೆ ರಾಜ್ಯದ ಸರ್ಕಾರಿ ಕಚೇರಿಯ ಸಮಯ ವನ್ನು ಬದಲಾವಣೆ ಮಾಡಿ ಎಂದು ನೌಕರರು ರಾಜ್ಯ ಸರ್ಕಾರಕ್ಕೆ ಬೇಡಿಕೆ ಇಟ್ಟಿದ್ದಾರೆ ಹೌದು

ರಾಜ್ಯದಲ್ಲಿ ಬಿಸಿಲ ತಾಪಮಾನ ದಿನೇ ದಿನೇ ಹೆಚ್ಚಾಗುತ್ತಿದೆ. ಬೆಳಗಾವಿ, ಕಲಬುರ್ಗಿಯಲ್ಲದೇ ಇತರೆ ಜಿಲ್ಲೆಗಳಲ್ಲಿಯೂ ಅಷ್ಟೇ ಪ್ರಮಾಣದಲ್ಲಿ ತಾಪಮಾನ ದಾಖಲಾಗುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಸರ್ಕಾರಿ ಕಚೇರಿ ಕೆಲಸದ ವೇಳೆಯನ್ನು ಬದಲಾವಣೆ ಮಾಡುವಂತೆ ಸಿಎಂ ಸಿದ್ಧರಾ ಮಯ್ಯ ಅವರಿಗೆ ಪತ್ರವನ್ನು ಬರೆದು ಈ ಒಂದು ಪತ್ರದಲ್ಲಿ ಮನವಿ ಮಾಡಲಾಗಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಈ ವರ್ಷ ಬಿಸಿಲಿನ ತಾಪಮಾನ ತೀವ್ರತರವಾಗಿರು ತ್ತದೆ. ರಾಜ್ಯದ ಬೆಳಗಾವಿ ಹಾಗೂ ಕಲಬುರಗಿ ವಿಭಾಗದ ಜಿಲ್ಲೆಗಳಿಗೆ ಸರ್ಕಾರವು ಈ ಹಿಂದೆ ಸರ್ಕಾರಿ ಕಛೇರಿ ಕೆಲಸದ ವೇಳೆಯನ್ನು ಬೆಳಿಗ್ಗೆ 08-00 ರಿಂದ ಮಧ್ಯಾಹ್ನ 01-30ರವರೆಗೆ ನಿಗಧಿಪಡಿಸಿತ್ತು

ಪ್ರಸ್ತುತ ರಾಜ್ಯದಲ್ಲಿ ಮೇಲ್ಕಂಡ ವಿಭಾಗದ ಜಿಲ್ಲೆಗಳೂ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಬಿಸಿಲಿನ ತಾಪಮಾನ ಬೆಳಿಗ್ಗೆ 09.00 ಗಂಟೆಗೆ ತೀವ್ರತರವಾಗಿ 40-44 ಗಿಂತಲೂ ಹೆಚ್ಚಿನ ತಾಪಮಾನ ದಾಖಲಾಗುತ್ತಿದೆ. ಸರ್ಕಾರಿ ನೌಕರರು ಕಛೇರಿಗೆ ತೆರಳಲು ಮತ್ತು ಸಾರ್ವಜನಿಕರೂ ಸಹ ಸರ್ಕಾರಿ ಕಛೇರಿಗೆ ಬರಲು ಕಷ್ಟಸಾಧ್ಯವಾಗುತ್ತಿರುವುದರಿಂದ ಬಿಸಿಲಿನ ತಾಪಮಾನ ಕಡಿಮೆಯಾಗುವವರೆಗೆ ಸರ್ಕಾರಿ ಕಛೇರಿಗಳ ಕೆಲಸದ ವೇಳೆಯನ್ನು ಮಾರ್ಪಡು ಮಾಡುವಂತೆ ರಾಜ್ಯದ ನೌಕರರು ವಿನಂತಿಸಿರು ತ್ತಾರೆ ಎಂದು ಹೇಳಿದ್ದಾರೆ.

ಮೇಲಿನ ಅಂಶಗಳ ಹಿನ್ನೆಲೆಯಲ್ಲಿ ಗರಿಷ್ಠ ತಾಪಮಾನದ ಹಿನ್ನೆಲೆಯಲ್ಲಿ ಹಾಗೂ ಸಾರ್ವಜನಿಕ ಹಿತದೃಷ್ಠಿಯಿಂದ ತಾಪಮಾನ ಕಡಿಮೆ ಆಗುವವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳ ಕಛೇರಿ ಕೆಲಸದ ವೇಳೆಯನ್ನು ಬೆಳಿಗ್ಗೆ 8.00 ರಿಂದ ಮಧ್ಯಾಹ್ನ 01.30 ಗಂಟೆಯವರೆಗೆ ನಿಗದಿಪಡಿಸಿ ಆದೇಶ ಹೊರಡಿಸಲು ಕೋರಿದ್ದು ಇದಕ್ಕೆ ರಾಜ್ಯ ಸರ್ಕಾರ ಯಾವ ರೀತಿ ಸ್ಪಂದಿಸಲಿದೆ ಎಂಬೊ ದನ್ನು ಕಾದು ನೋಡಬೇಕಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk