7ನೇ ವೇತನ ಆಯೋಗದ ಅಧ್ಯಕ್ಷರನ್ನು ತುರ್ತಾಗಿ ಭೇಟಿಯಾದ ರಾಜ್ಯ ಸರ್ಕಾರಿ ನೌಕರರ ಸಂಘಟನೆಯ ಟೀಮ್ – ಷಡಾಕ್ಷರಿ ಅವರ ನೇತ್ರತ್ವದಲ್ಲಿ ಭೇಟಿಯಾಗಿ ಅಧ್ಯಕ್ಷರಿಗೆ ಒತ್ತಾಯಿಸಿದ್ದೇನು ಗೊತ್ತಾ…..

Suddi Sante Desk
7ನೇ ವೇತನ ಆಯೋಗದ ಅಧ್ಯಕ್ಷರನ್ನು ತುರ್ತಾಗಿ ಭೇಟಿಯಾದ ರಾಜ್ಯ ಸರ್ಕಾರಿ ನೌಕರರ ಸಂಘಟನೆಯ ಟೀಮ್ – ಷಡಾಕ್ಷರಿ ಅವರ ನೇತ್ರತ್ವದಲ್ಲಿ ಭೇಟಿಯಾಗಿ ಅಧ್ಯಕ್ಷರಿಗೆ ಒತ್ತಾಯಿಸಿದ್ದೇನು ಗೊತ್ತಾ…..

ಬೆಂಗಳೂರು

7ನೇ ವೇತನ ಆಯೋಗದ ಅಧ್ಯಕ್ಷರನ್ನು ತುರ್ತಾಗಿ ಭೇಟಿಯಾದ ರಾಜ್ಯ ಸರ್ಕಾರಿ ನೌಕರರ ಸಂಘಟ ನೆಯ ಟೀಮ್ – ಷಡಾಕ್ಷರಿ ಅವರ ನೇತ್ರತ್ವದಲ್ಲಿ ಭೇಟಿಯಾಗಿ ಅಧ್ಯಕ್ಷರಿಗೆ ಒತ್ತಾಯಿಸಿದ್ದೇನು ಗೊತ್ತಾ…..

ರಾಜ್ಯದ ಸರ್ಕಾರಿ ನೌಕರರಿಗೆ ವೇತನ ಪರಿಷ್ಕ್ರರಣೆ ವಿಚಾರದಲ್ಲಿ ರಚನೆ ಮಾಡಿರುವ 7ನೇ ವೇತನ ಆಯೋಗದ ಅವಧಿಯನ್ನು ಮತ್ತೆ 6 ತಿಂಗಳು ಕಾಲ ವಿಸ್ತರಣೆ ಮಾಡ್ತಾರೆ ಎಂಬ ಸಂದೇಶ ಹರಿದಾಡುತ್ತಿದೆ.ಈ ಒಂದು ವಿಚಾರ ಗಮನಕ್ಕೆ ಬರುತ್ತಿದ್ದಂತೆ ಇತ್ತ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಅವರು ತುರ್ತಾಗಿ ಭೇಟಿಯಾಗಿ ಕೆಲವೊಂದಿಷ್ಟು ವಿಚಾರ ಗಳ ಕುರಿತಂತೆ ಚರ್ಚೆಯನ್ನು ಮಾಡಿದರು.

ಹೌದು 7ನೇ ವೇತನ ಆಯೋಗದ ಅವಧಿಯನ್ನು ಮತ್ತೆ 6 ತಿಂಗಳು ವಿಸ್ತರಣೆಯನ್ನು ಮಾಡದಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿಯವರ ನೇತ್ರತ್ವದಲ್ಲಿನ ಟೀಮ್ ಈ ಒಂದು ಒತ್ತಾಯವನ್ನು ಮಾಡಿತು.ತುರ್ತಾಗಿ ರಾಜ್ಯಾಧ್ಯಕ್ಷರ ನೇತ್ರತ್ವದಲ್ಲಿನ ರಾಜ್ಯ ಸರ್ಕಾರಿ ನೌಕರರ ಸಂಘಟನೆಯ ಟೀಮ್ ಭೇಟಿಯಾಗಿ ಮಹತ್ವದ ಮಾತುಕತೆಯನ್ನು ಮಾಡಿದರು.

ಸುಧಾಕರ್ ರಾವ್ ಭೇಟಿಯಾಗಿ 7ನೇ ವೇತನ ಆಯೋಗದ ಅವಧಿ ವಿಸ್ತರಣೆಗೆ ಅವಕಾಶ ಕೊಡದೆ ನವೆಂಬರ್ 2023ರ ಎರಡನೇ ವಾರ ದಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸಿ ಎಸ್ ಷಡಾಕ್ಷರಿ ಅವರು ಆಗ್ರಹವನ್ನು ಮಾಡಿದರು. ಆಯೋಗದ ಅಧ್ಯಕ್ಷರು ಕಾರ್ಯದರ್ಶಿಗಳು ಮತ್ತು ಸದಸ್ಯರಲ್ಲಿ ಮನವಿ ಮಾಡಿದರು.

ಇದರೊಂದಿಗೆ ಸಂಘಟನೆಯ ಈ ಒಂದು ಆಗ್ರಹವು ರಾಜ್ಯದ ಸಮಸ್ತ ಸರ್ಕಾರಿ ನೌಕರರಿಗೆ ಸಾಕಷ್ಟು ಅನುಕೂಲವಾಗಲಿ ಎಂಬೊದು ನಮ್ಮ ಆಶಯವಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.