This is the title of the web page
This is the title of the web page

Live Stream

[ytplayer id=’1198′]

September 2025
T F S S M T W
 123
45678910
11121314151617
18192021222324
252627282930  

| Latest Version 8.0.1 |

State News

ಸ್ವತಂ ಜಿಲ್ಲೆಗೆ ವರ್ಗಾವಣೆ ಬಯಸಿದ್ದ ಶಿಕ್ಷಕರೇಷ್ಟು ಗೊತ್ತಾ ಮಾಹಿತಿ ಸಂಗ್ರಹಿಸಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ ರಾಜ್ಯ ಸರ್ಕಾರಿ ನೌಕರರ ಸಂಘದವರು

WhatsApp Group Join Now
Telegram Group Join Now

ಬೆಂಗಳೂರು –

ರಾಜ್ಯದಲ್ಲಿ ಈವರೆಗೆ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವತಂ ಜಿಲ್ಲೆಗೆ ವರ್ಗಾವಣೆಯನ್ನು ಬಯಸಿ 9090 ಶಿಕ್ಷಕರಿದ್ದು ಇವರ ಸಮಗ್ರವಾದ ಮಾಹಿತಿ ಯನ್ನು ಸಂಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದವರು ರಾಜ್ಯ ಸರ್ಕಾರಕ್ಕೆ ಮಾಹಿತಿ ಯನ್ನು ನೀಡಿದ್ದಾರೆ.ಆರೋಗ್ಯ,ವಿಧವೆ, ವಿಚ್ಛೇದಿತ, ಪತಿ-ಪತ್ನಿ,ಅಂಗವಿಕಲತೆ ಹೀಗೆ ನಾನಾ ಕಾರಣಗಳಿಗೆ, ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಗಳಲ್ಲಿರುವ ಶಿಕ್ಷಕರಲ್ಲಿ 9,090 ಮಂದಿ ಒಂದು ಬಾರಿ ಅಂತರ ಜಿಲ್ಲಾ ವರ್ಗಾವಣೆ ಬಯಸಿದ್ದಾರೆ.

ಈ ಪೈಕಿ, ಕಲ್ಯಾಣ ಕರ್ನಾಟಕ ಭಾಗದ 2,931 ಶಿಕ್ಷಕರಿದ್ದಾರೆ.ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಾಲಾ ಶಿಕ್ಷಕರ ಸಮಸ್ಯೆಗಳ ಬಗ್ಗೆ ಸೆಪ್ಟಂಬರ್ 9 ರಂದು ಸಭೆ ನಡೆಸಿದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌, ಅಂತರ ಜಿಲ್ಲಾ ವರ್ಗಾವಣೆ ಬಯಸುವ ಶಿಕ್ಷಕರ ನಿಖರ ಮತ್ತು ವಾಸ್ತವಾಂಶದ ಮಾಹಿತಿ ಸಲ್ಲಿಸುವಂತೆ ಸೂಚಿಸಿ ದ್ದರು.ಅದರಂತೆ ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯದಾದ್ಯಂತ ಎಲ್ಲ ಜಿಲ್ಲೆಗಳಿಂದ ಅಂತರ ಜಿಲ್ಲಾ ವರ್ಗಾವಣೆ ಬಯಸುವ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ಜಿಲ್ಲಾವಾರು ಮಾಹಿತಿ ಸಂಗ್ರಹಿಸಿ ಸಚಿವರಿಗೆ ಸಲ್ಲಿಸಿದೆ.

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಜಿಲ್ಲಾವಾರು ಮಾಹಿತಿ

ದಾವಣಗೆರೆ (512), ವಿಜಯಪುರ (501), ತುಮಕೂರು (362), ಹಾವೇರಿ (353), ಬೆಳಗಾವಿ (330) ಜಿಲ್ಲೆಗಳಲ್ಲಿರುವ ಪ್ರಾಥಮಿಕ ಶಾಲೆಗಳ ಶಿಕ್ಷಕರು ಹಾಗೂ ವಿಜಯಪುರ (217), ದಾವಣಗೆರೆ (186), ಬಾಗಲಕೋಟೆ (182), ಕಲಬುರ್ಗಿ (169), ಬಳ್ಳಾರಿ (163) ಜಿಲ್ಲೆಯ ಪ್ರೌಢ ಶಾಲೆಗಳ ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ವರ್ಗಾವಣೆ ಬಯಸಿದ್ದಾರೆ.
‘ಕುಟುಂಬ ಸದಸ್ಯರಿಂದ 10- 15 ವರ್ಷಗಳಿಂದ ದೂರ ಇದ್ದು ದೂರದ ಜಿಲ್ಲೆಗಳಲ್ಲಿ ಸಾವಿರಾರು ಶಿಕ್ಷಕರು ಕೆಲಸ ನಿರ್ವಹಿಸುತ್ತಿದ್ದಾರೆ. ವರ್ಗಾವಣೆ ನಿಯಮಗಳ ನ್ಯೂನತೆಯ ಕಾರಣಕ್ಕೆ ಹಲವು ಶಿಕ್ಷಕರು ಮಾನಸಿಕ ಸ್ವಾಸ್ಥ್ಯವನ್ನೇ ಕಳೆದು ಕೊಂಡಿ ದ್ದಾರೆ. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಪಶ್ಚಿಮ ಬಂಗಾಳ ಸರ್ಕಾರ, ಅಲ್ಲಿನ ಶಿಕ್ಷಕರಿಗೆ ಅವರು ಇಚ್ಚಿಸಿರುವ ಜಿಲ್ಲೆಗೆ ಒಂದು ಬಾರಿ ವರ್ಗಾ ವಣೆ ಅವಕಾಶ ನೀಡಿದೆ.ಅದೇ ಮಾದರಿ ಯಲ್ಲಿ ರಾಜ್ಯದಲ್ಲೂ ವರ್ಗಾವಣೆಯ ಅವಕಾಶ ಮಾಡಿ ಕೊಡಬೇಕು ಎಂದು ಸಂಘದ ಅಧ್ಯಕ್ಷ ಸಿ.ಎಸ್‌. ಷಡಾಕ್ಷರಿ ಒತ್ತಾಯಿಸಿದ್ದಾರೆ.

ಇನ್ನೂ ಶಿಕ್ಷಕರಿಗೆ ಒಂದು ಬಾರಿಗೆ ಸೀಮಿತವಾಗಿ ಅಂತರಜಿಲ್ಲಾ ವರ್ಗಾವಣೆಗೆ ಅವಕಾಶ ಕಲ್ಪಿಸಲು ರಾಜ್ಯ ಸರ್ಕಾರ ವಿಶೇಷ ನಿಯಮ ರೂಪಿಸಬೇಕು. ಆ ಮೂಲಕ, ವರ್ಗಾವಣೆಗೆ ಅವಕಾಶ ಕಲ್ಪಿಸಬೇ ಕೆಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌. ಷಡಾಕ್ಷರಿ ಅವರು ಆಗ್ರಹ ಮಾಡಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk