ವರ್ಗಾವಣೆ ನಿರೀಕ್ಷೆ ಯಲ್ಲಿದ್ದ ಉಪನ್ಯಾಸಕರಿಗೆ ಶಾಕ್ ನೀಡಿದ ರಾಜ್ಯ ಸರ್ಕಾರ ಕಡ್ಡಾಯ ವರ್ಗಾವಣೆ ರದ್ದು ಮಾಡಿ ಮರು ವರ್ಗಾವಣೆ ಗೆ ಆದೇಶ…..

Suddi Sante Desk

ಬೆಂಗಳೂರು –

ವರ್ಗಾವಣೆಯ ನಿರೀಕ್ಷೆಯಲ್ಲಿದ್ದ ಪಿಯುಸಿ ಉಪನ್ಯಾಸ ಕರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಬಿಗ್ ಶಾಕ್ ನೀಡಿದ್ದು ಪಿಯುಸಿ ಉಪನ್ಯಾಸಕರ ಕೌನ್ಸಿಲಿಂಗ್ ನಲ್ಲಿ ಕೆಲವು ಲೋಪ ದೋಷಗಳು ಉಂಟಾದ ಹಿನ್ನೆಲೆಯಲ್ಲಿ ಜುಲೈ 7 ರಂದು ನಡೆಸಿದ್ದ ಕಡ್ಡಾಯ ವರ್ಗಾವಣೆಯನ್ನು ರದ್ದುಪಡಿಸಿ ಮರು ವರ್ಗಾವಣೆ ನಡೆಸಲು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಈ ಸಂಬಂಧ ವರ್ಗಾವಣೆ ಕೌನ್ಸಿಲಿಂಗ್ ಪ್ರಕ್ರಿಯೆ ಸುಸೂತ್ರ ವಾಗಿ ಮತ್ತು ಪಾರದರ್ಶಕವಾಗಿ ನಡೆಸಲು ಜಿಲ್ಲಾ ಉಪ ನಿರ್ದೇಶಕರು ತಮ್ಮ ಅಧೀನದಲ್ಲಿರುವ ಪದವಿ ಪೂರ್ವ ಕಾಲೇಜುಗಳಲ್ಲಿ ಮಂಜೂರಾದ ಖಾಲಿ ಇರುವ ಹುದ್ದೆಗಳ ಮಾಹಿತಿಯನ್ನು ಜುಲೈ 21 ರೊಳಗೆ ಸಲ್ಲಿಸುವಂತೆ ಇಲಾಖೆ ಯ ನಿರ್ದೇಶಕರು ಸೂಚಿಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.