This is the title of the web page
This is the title of the web page

Live Stream

[ytplayer id=’1198′]

November 2025
T F S S M T W
 12345
6789101112
13141516171819
20212223242526
27282930  

| Latest Version 8.0.1 |

State News

ರಾಜ್ಯಾಧ್ಯಕ್ಷ ಷಡಾಕ್ಷರಿಯವರ ಮೇಲೆ ಕೇಳಿ ಬಂತು ಹೊಸದೊಂದು ಆರೋಪ – ವರದಿ ಸಲ್ಲಿಸಲು ಸೂಚಿಸಿದ ರಾಜ್ಯ ಸರ್ಕಾರ…..

ರಾಜ್ಯಾಧ್ಯಕ್ಷ ಷಡಾಕ್ಷರಿಯವರ ಮೇಲೆ ಕೇಳಿ ಬಂತು ಹೊಸದೊಂದು ಆರೋಪ – ವರದಿ ಸಲ್ಲಿಸಲು ಸೂಚಿಸಿದ ರಾಜ್ಯ ಸರ್ಕಾರ…..
WhatsApp Group Join Now
Telegram Group Join Now

ಬೆಂಗಳೂರು

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘವು ಅವ್ಯವಹಾರ ಭ್ರಷ್ಟಾಚಾರ ಹಾಗೂ ಹಣ ದುರುಪ ಯೋಗದ ನಡೆಸಿದೆ ಎಂಬ ಆರೋಪದ ಆಧಾರ ದಲ್ಲಿ ಈ ಸಂಬಂದ ವಿಚಾರಣೆ ನಡೆಸಿ ಆರೋಪ ಸಾಬೀತಾದಲ್ಲಿ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಆಡಳಿತಾಧಿಕಾರಿ ನೇಮಕಕ್ಕೆ ಆದೇಶ ಹೊರಡಿಸಿದೆ.

ಜೂನ್ 19 ರಂದು ಸರ್ಕಾರದ ಪ್ರಧಾನ ಕಾರ್ಯದರ್ಶಿ ಕಚೇರಿಯಿಂದ ಸಹಕಾರ ಸಂಘಗಳ ಉಪ ನಿಬಂಧಕರಿಗೆ ಕಳಿಸಿರುವ ಆದೇಶ ಪತ್ರದಲ್ಲಿ ನೌಕರರ ಸಂಘದ ಕುರಿತು ಬಂದಿರುವ ಲಿಖಿತ ದೂರಿನ ಅನ್ವಯ ಈ ವಿಚಾರಣೆಗೆ ಆದೇಶ ನೀಡಲಾಗಿದೆ ಎಂದು ತಿಳಿಸಲಾಗಿದೆ.

ಜೂನ್ 02 ರಂದು ಸಿ.ಎಸ್ ಷಡಕ್ಷರಿಯವರು ಅಧ್ಯಕ್ಷರಾಗಿರುವ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಿರುದ್ಧ 5 ಗುರುತರ ಆರೋಪಗಳನ್ನು ಮಾಡಿ ಎನ್ ಪಿ ಎಸ್ ನೌಕರರ ಸಂಘದ ಶಾಂತಾರಾಮ್ ಮತ್ತು ಇತರರು ಸರ್ಕಾರಕ್ಕೆ ದೂರು ಅರ್ಜಿ ಸಲ್ಲಿಸಿದ್ದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಸರ್ಕಾರದಿಂದ ಪ್ರತಿವರ್ಷ ಕೋಟ್ಯಂತರ ರೂ.ಗಳ ಸಹಾಯಧನ ಪಡೆಯುತ್ತಿದ್ದು ಸಂಘವು ವಿವಿಧ ಕಾಯ್ದೆ ಮತ್ತು ನಿಯಮಗಳನ್ನು ಉಲ್ಲಂಘನೆ ಮಾಡಿ ಭ್ರಷ್ಟಾಚಾರ ಹಣ ದುರುಪಯೋಗ, ವಂಚನೆ ಹಾಗೂ ಕಾನೂನು ಬಾಹಿರ ಚಟುವಟಿ ಕೆಗಳು, ಆರ್ಥಿಕ ಅಪರಾಧಗಳನ್ನು ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಈ ಕುರಿತು ಕೆಲ ದಾಖಲೆಗಳನ್ನು ಒದಗಿಸಿ ಶಾಸ ನಾತ್ಮಕ ಕ್ರಮ ಜರುಗಿಸಲು ಕೋರಲಾಗಿದ್ದರೂ ಯಾವುದೇ ಕ್ರಮ ಜರುಗಿಸಲಾಗಿಲ್ಲ ಎಂದೂ ತಿಳಿಸಲಾಗಿದೆ.ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಆಡಳಿತಾಧಿಕಾರಿ ನೇಮಿಸಿ ಸರಕಾರದ ಬೊಕ್ಕಸಕ್ಕೆ, ಸಂಘಕ್ಕೆ ಹಾಗೂ ಸಂಘದ ಸದಸ್ಯರುಗಳಿಗೆ ಆರ್ಥಿಕ ನಷ್ಟ ಉಂಟು ಮಾಡಿರುವ ರಾಜ್ಯಾಧ್ಯಕ್ಷ ಷಡಾಕ್ಷರಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಕೋರಾಲಾಗಿದೆ.

ಇದೀಗ ಷಡಕ್ಷರಿ ವಿರುದ್ಧದ ದೂರಿನ ಹಿನ್ನೆಲೆ ಯಲ್ಲಿ ದೂರು ಅರ್ಜಿಯನ್ನು ಕೂಲಂಕಷವಾಗಿ ಪರಿಶೀಲಿಸಿ ಸಂಘದ ವಿರುದ್ಧ ಇರುವ ಐದು ಪ್ರಮುಖ ಆರೋಪಗಳ ವಿಚಾರಣೆ ನಡೆಸಿ ಆರೋಪಗಳು ಸಾಬೀತಾದಲ್ಲಿ ಸಂಘದ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲು ವರದಿ ಸಲ್ಲಿಸಲು ಸರ್ಕಾರ ಆದೇಶಿಸಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk