ರಾಜ್ಯದ ಸರ್ಕಾರಿ ನೌಕರರಿಗೆ ನೆಮ್ಮದಿಯ ಸುದ್ದಿ ನೀಡಿದ ರಾಜ್ಯ ಸರ್ಕಾರ ಕಂಪ್ಯೂಟರ್ ಸಾಕ್ಷರತಾ ಪರೀಕ್ಷಾ ದಿನಾಂಕ ಡಿಸೆಂಬರ್ 31 ರವರೆಗೆ ವಿಸ್ತರಣೆ ಮಾಡಿದ ಸಂತೋಷದ ಸುದ್ದಿ ನೀಡಿದ ಸರ್ಕಾರದ ಆದೇಶ

Suddi Sante Desk
ರಾಜ್ಯದ ಸರ್ಕಾರಿ ನೌಕರರಿಗೆ ನೆಮ್ಮದಿಯ ಸುದ್ದಿ ನೀಡಿದ ರಾಜ್ಯ ಸರ್ಕಾರ ಕಂಪ್ಯೂಟರ್ ಸಾಕ್ಷರತಾ ಪರೀಕ್ಷಾ ದಿನಾಂಕ ಡಿಸೆಂಬರ್ 31 ರವರೆಗೆ ವಿಸ್ತರಣೆ ಮಾಡಿದ ಸಂತೋಷದ ಸುದ್ದಿ ನೀಡಿದ ಸರ್ಕಾರದ ಆದೇಶ

ಬೆಂಗಳೂರು

ರಾಜ್ಯದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ನೆಮ್ಮದಿಯ ಸುದ್ದಿ ಯೊಂದನ್ನು ನೀಡಿದೆ ಹೌದು ಕಂಪ್ಯೂಟರ್ ಸಾಕ್ಷರತಾ ಪರೀಕ್ಷಾ ದಿನಾಂಕವನ್ನು ಮತ್ತೆ ಮುಂದೂಡಿಕೆ ಮಾಡಿ ಆದೇಶವನ್ನು ಹೊರಡಿಸಲಾಗಿದೆ ಹೌದು ಬಡ್ತಿ,ಮುಂಬಡ್ತಿಗಾಗಿ ಪಾಸ್ ಮಾಡುವುದನ್ನು ಕಡ್ಡಾಯಗೊಳಿಸ ಲಾಗಿತ್ತು ಈ ಪರೀಕ್ಷೆಯಲ್ಲಿ ಡಿಸೆಂಬರ್ 31, 2022ರೊಳಗೆ ಮುಕ್ತಾಯಗೊಳಿಸುವುದಕ್ಕೆ ಸೂಚಿಸಲಾಗಿತ್ತು.

ಇದೀಗ ಈ ಅವಧಿಯನ್ನು ಡಿ.31, 2023ರವರೆಗೆ ವಿಸ್ತರಿಸಲಾಗಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಸಂತೋಷದ ಸುದ್ದಿ ಯೊಂದನ್ನು ನೀಡಿದೆ.ರಾಜ್ಯ ಸರ್ಕಾರದ ಅಧೀನ ಕಾರ್ಯ ದರ್ಶಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೇರ್ಗಡೆ ಹೊಂದಲು ಪ್ರಸ್ತುತ ವಿಧಿಸಲಾಗಿರುವ ಕಾಲಮಿತಿಯನ್ನು ದಿನಾಂಕ 31-12-2022ರಿಂದ 31-12-2023ರವರಗೆ ವಿಸ್ತರಿಸಲು ಮುಖ್ಯಮಂ ತ್ರಿಯವರಿಗೆ ಕೋರಿದ್ದರು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಸಲ್ಲಿಸಿದ್ದರು ಇದೀಗ ಅವರು ರಾಜ್ಯ ಸರ್ಕಾರಿ ನೌಕರರಿಗೆ ಬಡ್ತಿ, ಮುಂಬಡ್ತಿಗೆ ಕಡ್ಡಾಯ ಗೊಳಿಸಲಾಗಿದ್ದಂತ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೇರ್ಗಡೆ ಮಾಡಲು ದಿನಾಂಕ 31-12-2023ರವರೆಗೆ ಅವಧಿ ವಿಸ್ತರಣೆಗೆ ಅನುಮತಿ ನೀಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.