ರಾಜ್ಯದ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ ಇನ್ನೂ ಮುಂದೆ ಆನ್ ಲೈನ್ ನಲ್ಲಿಯೇ ಇತ್ಯರ್ಥಕ್ಕೆ ವ್ಯವಸ್ಥೆ…..

Suddi Sante Desk

ಬೆಂಗಳೂರು –

ರಾಜ್ಯ ಸರ್ಕಾರಿ ನೌಕರರ ಜೀವ ವಿಮಾ ಪಾಲಿಸಿಗಳ ಮೇಲೆ ಸಾಲ ಮಂಜೂರಾತಿ ಮತ್ತು ಎಲ್ಲಾ ಬಗೆಯ ಹಕ್ಕು ಪ್ರಕರಣ ಗಳನ್ನು ಆನ್ ಲೈನ್ ಮೂಲಕ ಇತ್ಯರ್ಥದ ವ್ಯವಸ್ಥೆಯನ್ನು ಜಾರಿಗೊಳಿಸಿದೆ.ಈ ಮೂಲಕ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದೆ.ಈ ಬಗ್ಗೆ ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ನಿರ್ದೇಶಕರು ಅಧಿಕೃತ ಆದೇಶ ಹೊರಡಿ ಸಿದ್ದಾರೆ. ಇಲಾಖೆಯ ಗಣಕೀಕರಣ ಕಾರ್ಯ ಪ್ರಗತಿಯ ಲ್ಲಿದೆ.ಎಲ್ಲಾ ಬಗೆಯ ಹಕ್ಕು ಪ್ರಕರಣಗಳನ್ನು ಇತ್ಯರ್ಥ ಪಡಿಸುವ ಸಾಫ್ಟ್ ವೇರ್ ನ ಅಭಿವೃದ್ಧಿಕಾರ್ಯ ಮುಗಿದಿದೆ. ಅಲ್ಲದೇ ಈ ಸಾಫ್ಟ್ ವೇರ್ ಬಳಕೆ ಬಗ್ಗೆ ತರಬೇತಿ ಕೂಡ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನೂ ಜೀವ ವಿಮಾ ಪಾಲಿಸಿಗಳ ಮೇಲೆ ಸಾಲ ಮಂಜೂ ರಾತಿ ಮತ್ತು ಎಲ್ಲಾ ಬಗೆಯ ಹಕ್ಕು ಪ್ರಕರಣಗಳನ್ನು ಕಡ್ಡಾಯವಾಗಿ ಆನ್ ಲೈನ್ ಮೂಲಕ ಇತ್ಯರ್ಥಗೊಳಿಸಲು ಪ್ರಾಯೋಗಿಕ ಪರೀಕ್ಷೆಗಾಗಿ ಬೆಂಗಳೂರು ನಗರ,ಬೆಳಗಾವಿ, ಕೊಡಗು,ಧಾರವಾಡ,ಮೈಸೂರು,ಯಾದಗಿರಿ ಮತ್ತು ಚಿಕ್ಕ ಮಗಳೂರು ಜಿಲ್ಲೆಯಲ್ಲಿ ಜಾರಿಗೆ ತರಲಾಗಿದೆ.

ಈ ಹಿನ್ನಲೆಯಲ್ಲಿ ಇನ್ಮುಂದೆ ಜೀವ ವಿಮಾ ಕಚೇರಿಗಳಲ್ಲಿ ಸಾಲ ಮಂಜೂರಾತಿ ಮತ್ತು ಎಲ್ಲಾ ಬಗೆಯ ಪ್ರಕರಣ ಗಳನ್ನು ಕಡ್ಡಾಯವಾಗಿ ಆನ್ ಲೈನ್ ಮೂಲಕ ಇತ್ಯರ್ಥ ಪಡಿಸುವುದು.

ಪ್ರಕರಣಗಳನ್ನು ಆಫ್ ಲೈನ್ ಮೂಲಕ ಇತ್ಯರ್ಥಪಡಿಸುವ ಕಾರ್ಯವನ್ನು ಕಡ್ಡಾಯವಾಗಿ ನಿಲ್ಲಿಸುವಂತೆ ಸೂಚಿಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.