ಬೆಂಗಳೂರು –
ಹೌದು ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಗುಡ್ ನ್ಯೂಸ್ ನ್ನು ರಾಜ್ಯ ಸರ್ಕಾರ ನೀಡಿದೆ ರಾಜ್ಯ ಸರ್ಕಾರ ಮುಂದಿನ ಶೈಕ್ಷಣಿಕ ವರ್ಷ ಶಾಲಾರಂಭ ದಿನವೇ ಸಮವಸ್ತ್ರ, ಪಠ್ಯಪುಸ್ತಕಗಳನ್ನು ವಿತರಣೆ ಮಾಡಲು ಪ್ಲಾನ್ ಮಾಡಿಕೊಂಡಿದೆ.
ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು ಮುಂದಿನ ಶೈಕ್ಷಣಿಕ ವರ್ಷ ದಲ್ಲಿ ಶಾಲೆ ಆರಂಭದ ದಿನವೇ ವಿದ್ಯಾರ್ಥಿಗಳಿಗೆ ಸಮವಸ್ತ್ರ ಪಠ್ಯಪುಸ್ತಕ ತಲುಪಿಸಲು ಸಿದ್ಧತೆ ನಡೆಸಿದೆ.ಕಳೆದ ವರ್ಷ ಸಮವಸ್ತ್ರ ಹಾಗೂ ಪಠ್ಯ ಪುಸ್ತಕವನ್ನು ಸಕಾಲಕ್ಕೆ ಪೂರೈಸದೇ ಟೀಕೆ ಎದು ರಿಸಿದ್ದ ಶಿಕ್ಷಣ ಇಲಾಖೆ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಶಾಲೆ ಆರಂಭದ ದಿನವೇ ವಿದ್ಯಾರ್ಥಿ ಗಳಿಗೆ ಸಮವಸ್ತ್ರ ಪಠ್ಯಪುಸ್ತಕ ವಿತರಿಸಲು ಮುಂದಾಗಿದೆ.
1 ರಿಂದ 10 ನೇ ತರಗತಿ ವಿದ್ಯರ್ಥಿಗಳಿಗೆ ಪೂರೈಸಬೇಕಿರುವ ಪಠ್ಯಪುಸ್ತಕದಲ್ಲಿ ಶೇ. 60 ಕ್ಕೂ ಹೆಚ್ಚು ಪುಸ್ತಕಗಳು ಆಯಾ ಕ್ಷೇತ್ರ ಶಿಕ್ಷಣಾಧಿಕಾರಿ ಗಳ ವ್ಯಾಪ್ತಿಯ ಗೋದಾಮುಗಳಲ್ಲಿ ಈಗಾಗಲೇ ದಾಸ್ತಾನು ಮಾಡಲಾಗಿದೆ.
ಮುಂದಿನ ಶೈಕ್ಷಣಿಕ ವರ್ಷದ ಆರಂಭದಲ್ಲಿ ಮಕ್ಕಳಿಗೆ ಮೊದಲ ಜೊತೆ ಸಮವಸ್ತ್ರ ನೀಡಲು ಟೆಂಡರ್ ಕರೆದು ಕಾರ್ಯಾದೇಶ ನೀಡಲಾಗಿದೆ. ಹೀಗಾಗಿ ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವರ್ಷದ ಆರಂಭದ ದಿನವೇ ಸಮವಸ್ತ್ರ ಸಿಗಲಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..