This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ವೇತನ ಹೆಚ್ಚಳ ಮಾಡಿ ರಾಜ್ಯದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – OPS ಮಾತೆ ಇಲ್ಲ ಇನ್ನೂ ತೀರ್ಮಾನವನ್ನು ಕೈಗೊಳ್ಳದ ರಾಜ್ಯದ ನೌಕರರ ಸಂಘಟನೆಯ ನಾಯಕರು…

WhatsApp Group Join Now
Telegram Group Join Now

ಬೆಂಗಳೂರು

ಏಳನೇ ವೇತನ ಆಯೋಗದ ವರದಿ ಜಾರಿ ಸೇರುವಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟು ರಾಜ್ಯಾದ್ಯಂತ ಸರ್ಕಾರಿ ನೌಕರರು ರಾಜ್ಯದಲ್ಲಿ ಇಂದು ಮುಷ್ಕರ ನಡೆಸುತ್ತಿದ್ದಾರೆ.ನಿನ್ನೆ ತಡರಾತ್ರಿ ವರೆಗೂ ಏನೇಲ್ಲಾ ಕಸರತ್ತು ಮಾಡಿದರು ಕೂಡಾ ತಾರ್ಕಿಕ ಪರಿಹಾರ ಸಿಗಲಿಲ್ಲ ಹೀಗಾಗಿ ಮತ್ತೆ ರಾಜ್ಯದಲ್ಲಿ ನೌಕರರ ಹೋರಾಟ ಆರಂಭ ಗೊಂಡಿದೆ.

ಈ ಒಂದು ಪ್ರತಿಭಟನೆ ಹಿನ್ನೆಲೆ ಯಲ್ಲಿ ರಾಜ್ಯ ಸರ್ಕಾರ ತುರ್ತು ನಿರ್ಧಾರವನ್ನು ತೆಗೆದು ಕೊಂಡಿದೆ.ಹೌದು ತಕ್ಷಣಕ್ಕೆ ಸರ್ಕಾರಿ ನೌಕರರ ವೇತನದಲ್ಲಿ ಶೇ.17ರಷ್ಟು ಹೆಚ್ಚಳ ಮಾಡಲು ಸರ್ಕಾರ ನಿರ್ಧರಿಸಿದೆ.

 

 

ಈ ಬಗ್ಗೆ ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿಯವರು ಮಧ್ಯಂತರ ಪರಿಹಾರ ವೇತನ ಘೋಷಣೆ ಮಾಡಿದ್ದೇವೆ.ವರದಿ ಬಂದ ತಕ್ಷಣ ಏಳನೇ ವೇತನ ಆಯೋಗದ ವೇತನ ಜಾರಿ ಮಾಡಲಿದ್ದೇವೆ ಎಂದರು.ಇನ್ನೂ ಎನ್‌ಪಿಎಸ್‌ ರದ್ದು ಮಾಡುವ ಬಗ್ಗೆ ಸಮಿತಿ ರಚನೆ ಮಾಡಿ ತೀರ್ಮಾನ ಕೈಗೊಳ್ಳಲಾಗುವುದು ನೌಕರರು ಮುಷ್ಕರ ಕೈಬಿಡುವ ವಿಶ್ವಾಸವಿದೆ ಎಂದು ಸಿಎಂ ಬೊಮ್ಮಾಯಿ ಇದೇ ವೇಳೆ ಹೇಳಿದ್ದಾರೆ.

 

ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಯವರು, ಸರ್ಕಾರದಿಂದ ಈ ಬಗ್ಗೆ ಸ್ಪಷ್ಟ ಆದೇಶ ಆಗುವವರೆಗೂ ಮುಷ್ಕರ ಹಿಂಪಡೆಯವುದಿಲ್ಲ. ಸರ್ಕಾರ ಆದೇಶ ಹೊರಡಿಸಿದ ನಂತರ ಎಲ್ಲರ ಜೊತೆ ಚರ್ಚೆ ಮಾಡಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದ್ದು ಏನೇನು ಆಗುತ್ತದೆ ಎಂಬೊದನ್ನು ಕಾದು ನೋಡಬೇಕಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk