ರಾಜ್ಯದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ನೀವೆನಾದರೂ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪಾಸ್ ಆಗಿದ್ದರೆ ನಿಮಗೆ ಸಿಗಲಿದೆ 5 ಸಾವಿರ ರೂಪಾಯಿ‌…..

Suddi Sante Desk
ರಾಜ್ಯದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ನೀವೆನಾದರೂ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪಾಸ್ ಆಗಿದ್ದರೆ ನಿಮಗೆ ಸಿಗಲಿದೆ 5 ಸಾವಿರ ರೂಪಾಯಿ‌…..

ಬೆಂಗಳೂರು

ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದೆ‌. ಹೌದು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸರ್ಕಾರಿ ನೌಕರರಿಗೆ 5 ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ರಾಜ್ಯದ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಸಾಕ್ಷರತೆ ಯನ್ನು ಬಡ್ತಿ,ಮುಂಬಡ್ತಿಗಾಗಿ ಪಾಸ್ ಮಾಡುವು ದನ್ನು ಕಡ್ಡಾಯಗೊಳಿಸಲಾಗಿತ್ತು.

ಈ ಪರೀಕ್ಷೆಯಲ್ಲಿ ಡಿಸೆಂಬರ್ 31,2022ರೊಳಗೆ ಮುಕ್ತಾಯಗೊಳಿಸುವುದಕ್ಕೆ ಸೂಚಿಸಲಾಗಿತ್ತು. ನಂತರ ಈ ಅವಧಿಯನ್ನು ಡಿ.31, 2023ರವರೆಗೆ ವಿಸ್ತರಿಸಲಾಗಿತ್ತು.ಇದೀಗ ರಾಜ್ಯ ಸರ್ಕಾರ ಇದರೊಂದಿಗೆ ನೌಕರರಿಗೆ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು ದಿನಾಂಕ: 17.04. 2021 ರೊಳಗೆ ಸದರಿ ಪರೀಕ್ಷೆಯಲ್ಲಿ ಉತ್ತೀರ್ಣ ರಾಗಿರುವ ಅರ್ಹ ಸೇವಾನಿರತ ಸರ್ಕಾರಿ ನೌಕರರು ಹಾಜರುಪಡಿಸುವ ಡಿಜಿಟಲ್ ಸಹಿ ಹೊಂದಿರುವ ಕಂಪ್ಯೂಟರ್ ಸಾಕ್ಷರತಾ ಪರೀಕ್ಷಾ ಪುಮಾಣ ಪತ್ರವನ್ನು ಪರಿಶೀಲಿಸಿ ಉತ್ತೀರ್ಣ ರಾದ ದಿನಾಂಕವನ್ನು ಖಚಿತಪಡಿಸಿಕೊಂಡು ಪ್ರೋತ್ಸಾಹ ಧನ ಮಂಜೂರು ಮಾಡಲು ಕ್ರಮಕೈಗೊಳ್ಳುವಂತೆ ಪ್ರಾಧಿಕಾರಗಳಿಗೆ ಈ ಮೂಲಕ ಸರ್ಕಾರ ಆದೇಶಿಸಿದೆ.

ಕರ್ನಾಟಕ ಸಿವಿಲ್ ಸೇವಾ ನಿಯಮಗಳು 2012ರ ಅನ್ವಯ ದಿನಾಂಕ 17:04:2021 ರೊಳಗೆ ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅರ್ಹ ಸೇವಾ ನಿರತ ನೌಕರರಿಗೆ ಈ ಪ್ರೋತ್ಸಾಹ ಧನ ಸಿಗಲಿದೆ.ಈ ಪರೀಕ್ಷೆ ಬರೆಯಲು 2.55 ಲಕ್ಷಕ್ಕೂ ಹೆಚ್ಚು ಜನ ನೌಕರರು ನೊಂದಣಿ ಮಾಡಿಕೊಂಡಿದ್ದರೂ,1.5 ಲಕ್ಷ ನೌಕರರಿಮಾತ್ರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.