This is the title of the web page
This is the title of the web page

Live Stream

[ytplayer id=’1198′]

September 2025
T F S S M T W
 123
45678910
11121314151617
18192021222324
252627282930  

| Latest Version 8.0.1 |

State News

ರಾಜ್ಯದ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ಶಿಕ್ಷಕರ ಬಹುದಿನಗಳ ಬೇಡಿಕೆಗಳಿಗೆ ಅಸ್ತು ನೀಡಿದ ರಾಜ್ಯ ಸರ್ಕಾರ…..

ರಾಜ್ಯದ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ಶಿಕ್ಷಕರ ಬಹುದಿನಗಳ ಬೇಡಿಕೆಗಳಿಗೆ ಅಸ್ತು ನೀಡಿದ ರಾಜ್ಯ ಸರ್ಕಾರ…..
WhatsApp Group Join Now
Telegram Group Join Now

ಬೆಂಗಳೂರು

ಪ್ರಾಥಮಿಕ ಶಾಲೆಗಳ ಪದವೀಧರ ಶಿಕ್ಷಕರ ಬಡ್ತಿ ತಾರತಮ್ಯ ಹೋಗಲಾಡಿಸಲು ನೇಮಕಾತಿ ನಿಯಮಗಳ ತಿದ್ದುಪಡಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ2016ಕ್ಕಿಂತ ಮೊದಲು ನೇಮಕ ವಾದ ಶಿಕ್ಷಕರಿಗೆ 2017ರ ನಿಯಮ ಅನ್ವಯಿ ಸಬಾರದು.1ರಿಂದ 8ನೇ ತರಗತಿಯ ಪ್ರಾಥಮಿಕ ಶಾಲೆಗಳಿಗೆ ನೇಮಕವಾದ ಶಿಕ್ಷಕರನ್ನು 1ರಿಂದ 5ನೇ ತರಗತಿಗೆ ಸೀಮಿತಗೊಳಿಸಿರುವ ಆದೇಶ ವನ್ನು ಹಿಂಪಡೆಯಬೇಕು.

ಪದವಿ ವಿದ್ಯಾರ್ಹತೆ ಹೊಂದಿರುವ ಶಿಕ್ಷಕರನ್ನು ಪದವೀಧರ ಪ್ರಾಥಮಿಕ ಶಿಕ್ಷಕರು (ಜಿಪಿಟಿ) ಎಂದು ಪರಿಗಣಿಸಬೇಕು ಅದಕ್ಕಾಗಿ ಬಡ್ತಿ, ವರ್ಗಾವಣೆಗೆ ಅಡ್ಡಿಯಾಗಿರುವ ವೃಂದ ಮತ್ತು ನೇಮಕಾತಿ ನಿಯಮ-2017ಕ್ಕೆ ತಿದ್ದುಪಡಿ ತಂದು ನ್ಯಾಯ ದೊರಕಿಸಿಕೊಡಬೇಕು ಎಂಬ ಬೇಡಿಕೆ ಇಟ್ಟಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ತಾರತಮ್ಯ ನಿವಾರಿಸಿ, ಬಡ್ತಿ ನೀಡುವ ಭರವಸೆ ನೀಡಿದ್ದರು. ಕರ್ನಾಟಕ ಆಡಳಿತ ನ್ಯಾಯ ಮಂಡಳಿ ಸಹ ಪದವೀಧರ ಪ್ರಾಥಮಿಕ ಶಿಕ್ಷಕರ ವೃಂದಕ್ಕೆ ಬಡ್ತಿ ನೀಡಲು ಆದೇಶಿಸಿತ್ತು. ಈಗ ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ತಾಂತ್ರಿಕ ಶಿಕ್ಷಣ ಇಲಾಖೆ) (ವೃಂದ ಮತ್ತು ನೇಮಕಾತಿ) ನಿಯಮಗಳು 2024 ಕ್ಕೆ ಸಂಪುಟ ಸಭೆಯ ಅನುಮೋದನೆ ದೊರೆತಿದೆ.

ತಾಂತ್ರಿಕ ಶಿಕ್ಷಣ ಇಲಾಖೆಯ ಬೋಧಕ ಹುದ್ದೆ ಗಳನ್ನು ಎಐಸಿಟಿಇ ವೇತನ ಶ್ರೇಣಿ ನಿಯಮಗಳ ಪ್ರಕಾರ ಭರ್ತಿ ಮಾಡಬೇಕು.7ನೇ ವೇತನ ಶ್ರೇಣಿ ಯನ್ನು ಅಳವಡಿಸಿಕೊಳ್ಳಲು ಹೊಸ ವೃಂದ ಮತ್ತು ನೇಮಕಾತಿ ನಿಯಮಾವಳಿ ಜಾರಿ ಮಾಡಲೂ ಸಭೆ ಸಮ್ಮತಿಸಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk