ಕಳಸಾ ಬಂಡೂರಿ ಹೋರಾಟ ಗಾರರಿಗೆ ಮತ್ತೆ ಸಮನ್ಸ್ ಜಾರಿ ಎಲ್ಲಾ ಪ್ರಕರಣಗಳನ್ನು ಹಿಂದೆ ಪಡೆದಿದೆ ಎಂದು ಹೇಳಿದ್ದ ರಾಜ್ಯ ಸರ್ಕಾರ…..

Suddi Sante Desk

ನವಲಗುಂದ –

ಮಹಾದಾಯಿ ಕಳಸಾ ಬಂಡೂರಿ ಹೋರಾಟಗಾರರ ಮೇಲಿನ ಪ್ರಕರಣಗಳನ್ನು ಹಿಂದೆ ಪಡೆಯಲಾಗಿದೆ ಎಂದು ಹೇಳಿದ್ದ ರಾಜ್ಯ ಸರ್ಕಾರದ ಮಾತಿನ ಬೆನ್ನಲ್ಲೇ ಈಗ ಹೋರಾಟಗಾರರಿಗೆ ಸಮನ್ಸ್ ಜಾರಿಯಾಗಿದೆ. ಹೌದು ಮಹದಾಯಿ ಹಾಗೂ ಕಳಸಾ ಬಂಡೂರಿ ಹೋರಾಟದಲ್ಲಿ ಪಾಲ್ಗೊಂಡಿದ್ದ ರೈತರ ಮೇಲಿನ ಎಲ್ಲ ಪ್ರಕರಣಗಳನ್ನು ಹಿಂಪಡೆಯಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿತ್ತು. ಆದರೆ ಈಗ ಹೋರಾಟಗಾರರಿಗೆ ಇಲ್ಲಿಯ ಹಿರಿಯ ದಿವಾಣಿ ನ್ಯಾಯಾಲಯದಿಂದ ಮತ್ತೆ ಸಮನ್ಸ್‌ ಜಾರಿ ಮಾಡಿದೆ.

ಕಳಸಾ-ಬಂಡೂರಿ ನಾಲೆ ಜೋಡಣೆಗಾಗಿ ನಡೆದ ಹೋರಾಟದಲ್ಲಿ ಪಾಲ್ಗೊಂಡಿದ್ದ ತಾಲ್ಲೂಕಿನ ಪಡೆಸೂರ ಗ್ರಾಮದ ರಮೇಶ ವೆಂಕರಡ್ಡಿ ನವಲಗುಂದ ಅವರಿಗೆ ಡಿಸೆಂಬರ್.7ರಂದು ತಪ್ಪದೇ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದು ಇದರಿಂದಾಗಿ ರೈತ ರಮೇಶ ಆತಂಕ ವ್ಯಕ್ತಪಡಿಸಿದ್ದಾರೆ.ಹೋರಾಟಗಾರರ ಮೇಲಿನ ಎಲ್ಲ ಪ್ರಕರಣಗಳನ್ನು ಹಿಂಪಡೆಯಲಾಗಿದೆ ಎಂದು ಸರ್ಕಾರ ಹೇಳಿತ್ತು.ಆದರೆ ಸಮನ್ಸ್ ಬಂದಿರುವುದು ಆಶ್ಚರ್ಯ ಮೂಡಿಸಿದೆ.ಈ ಬಗ್ಗೆ ವಕೀಲರೊಂದಿಗೆ ಚರ್ಚಿಸಿದಾಗ ಪ್ರಕರಣ ಮುಕ್ತಾಯವಾಗಿದೆ ಎಂದು ಕಂಪ್ಯೂಟರ್‌ನಲ್ಲಿ ತೋರಿಸುತ್ತಿದೆ ಆದರೆ ಪೊಲೀಸರು ನ್ಯಾಯಾಲಯಕ್ಕೆ ಖುದ್ದು ಹಾಜರಾಗಲೇಬೇಕು ಎಂದು ಹೇಳುತ್ತಿದ್ದಾರೆ ಎಂದರು.ಇನ್ನೂ ನಮ್ಮೂರಿನಲ್ಲಿ ಒಟ್ಟು ಇಬ್ಬರಿಗೆ ಸಮನ್ಸ್ ಬಂದಿದೆ. ನ್ಯಾಯಾಲಯಕ್ಕೆ ಹಾಜರಾಗುವುದಿಲ್ಲ ಬೇಕಾದರೆ ಬಂಧಿಸಿ ನಮ್ಮನ್ನು ಜೈಲಿಗೆ ಹಾಕಲಿ ನಾವು ಎಲ್ಲದ್ದಕ್ಕೂ ಸಿದ್ಧ ಎಂದಿದ್ದಾರೆ ರಮೇಶ ವೆಂಕರಡ್ಡಿ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.