ಕೋವಿಡ್ ಪರಿಷ್ಕೃತ ಮಾರ್ಗ ಸೂಚಿಗಳು ಪ್ರಕಟ – ಹಬ್ಬ ಹರಿದಿನಗಳು ಸೇರಿದಂತೆ ಎಲ್ಲದಕ್ಕೂ ಬ್ರೇಕ್ ಹಾಕಿದ ರಾಜ್ಯ ಸರ್ಕಾರ…..

Suddi Sante Desk

ಬೆಂಗಳೂರು‌ –

ಕೋವಿಡ್ ಎರಡನೆ ಅಲೆಯ ಪರಿಣಾಮ ಪ್ರಕರಣ ಗಳು ಹೆಚ್ಚಾಗುತ್ತಿದ್ದು ಇದರ ನಿಯಂತ್ರಣಕ್ಕಾಗಿ ರಾಜ್ಯ ಸರಕಾರ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಟಿಸಿದೆ ಈ ಹಿನ್ನೆಲೆಯಲ್ಲಿ ಯುಗಾದಿ, ಹೋಳಿ, ಶಬೇ ಬರಾಅತ್, ಗುಡ್ ಫ್ರೈಡೇ ಹಬ್ಬಗಳಿಗೆ ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಗೂಡದಂತೆ ನಿಷೇಧವನ್ನು ಹೇರಿ ಆದೇಶ ಹೊರಡಿಸಲಾಗಿದೆ.

ಈ ಕುರಿತು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪರಿಷ್ಕೃತ ಮಾರ್ಗಸೂಚಿ ಪ್ರಕಟಿ ಸಿದ್ದು ಸಾರ್ವಜನಿಕ ಸ್ಥಳ ಮೈದಾನ, ಪಾರ್ಕ್ ಮಾರ್ಕೆಟ್ ಮತ್ತು ಪ್ರಾರ್ಥನಾ ಮಂದಿರಗಳಲ್ಲಿ ಹಬ್ಬಗಳ ಆಚರಣೆಯನ್ನು ನಿಷೇಧಿಸಿದೆ. ಆದೇಶ ವನ್ನು ಉಲ್ಲಂಘಿಸಿದರೆ ಎನ್‍ಡಿಎಂಎ ಕಾಯ್ದೆಯಡಿ ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

ದಿನೇ ದಿನೇ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದರ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಅಗತ್ಯವಿದೆ.ಹೀಗಾಗಿ ಹಬ್ಬಗಳಂದು ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಗೂಡುವುದು ಸಾಮಾನ್ಯ. ಇದರಿಂದ ಕೋವಿಡ್ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದೆ. ಮುಂಜಾಗ್ರತಾ ಕ್ರಮವಾಗಿ ಹಬ್ಬಗಳಂದು ಸಾರ್ವಜನಿಕವಾಗಿ ಗುಂಪು ಗೂಡುವಿಕೆಯನ್ನು ನಿರ್ಬಂಧಿಸಲಾಗಿದೆ.

ಹೊಸದಾಗಿ ಜಾರಿಗೆ ತಂದಿರುವ ಪರಿಷ್ಕೃತ ಮಾರ್ಗಸೂಚಿಯನ್ನು ಬಿಬಿಎಂಪಿ ಆಯುಕ್ತರು ಸೇರಿದಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಸರಕಾರ ದ ಮುಖ್ಯ ಕಾರ್ಯದರ್ಶಿ ಆದೇಶ ಪತ್ರದಲ್ಲಿ ಸೂಚನೆ ನೀಡಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.