ಕರೋನ ವಾರಿಯರ್ ನಿಧನಕ್ಕೆ ಪರಿಹಾರ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ – ಮೃತಪಟ್ಟ ಶಿಕ್ಷಕರ ನೌಕರರ ಕುಟುಂಬಕ್ಕೆ 6.9 ಕೋಟಿ ರೂಪಾಯಿ ಬಿಡುಗಡೆ ಮಾಡಿದ ಇಲಾಖೆ…..

Suddi Sante Desk

ಬೆಂಗಳೂರು

ರಾಜ್ಯದ ಸರಕಾರಿ ಪ್ರೌಢಶಾಲೆಗಳಲ್ಲಿ ಕೊರೊನಾ ವಾರಿಯ ರ್ ಗಳಾಗಿ ಕಾರ್ಯ ನಿರ್ವಹಿಸಿ ಮೃತಪಟ್ಟಿರುವ ನೌಕರರಿಗೆ ಪರಿಹಾರ ನೀಡಲು 6.9 ಕೋಟಿ ರೂ.ಗಳನ್ನು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.ರಾಜ್ಯ ಸರಕಾರಿ ಪ್ರೌಢಶಾಲೆ ಗಳಲ್ಲಿ 2021-22ನೇ ಸಾಲಿನಲ್ಲಿ ಶಾಲೆಗಳ ನಿರ್ವಹಣೆಗೆ ಯಾವುದೇ ಅನುದಾನವನ್ನು ನಿಗದಿ ಮಾಡಿಲ್ಲ

.

ವಿದ್ಯುತ್‌,ನೀರಿನ ವೆಚ್ಚ, ಶೌಚಾಲಯ ಸ್ವಚ್ಛತೆ ವೆಚ್ಚ, ಕರ್ತವ್ಯ ನಿರ್ವಹಣೆ ವೇಳೆ ಮೃತಪಟ್ಟ ನೌಕರರ ಶವ ಸಂಸ್ಕಾರಕ್ಕಾಗಿ ಸಹಾಯಧನ ಹಾಗೂ ಕೊರೊನಾ ವಾರಿಯರ್‌ಗಳಾಗಿ ಸೇವೆ ಸಲ್ಲಿಸಿ ಮೃತಪಟ್ಟಿರುವವರಿಗೆ ಪರಿಹಾರ ಕಲ್ಪಿಸಲು 29.25 ಕೋಟಿ ರೂ.ಗಳ ಅನುದಾನ ಕ್ಕಾಗಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಈ ಅನುದಾನವನ್ನು 2022-23ನೇ ಸಾಲಿನಲ್ಲಿ ಪ್ರೌಢಶಾಲೆ ಗಳ ಸಾದಿಲ್ವಾರು ವೆಚ್ಚಕ್ಕಾಗಿ ಒಟ್ಟಾರೆ 24.76 ಕೋಟಿ ರೂ.ಗಳನ್ನು ನಿಗದಿ ಮಾಡಲಾಗಿದೆ.ಇದರಲ್ಲಿಯೇ ಕೊರೊ ನಾದಿಂದ ಮೃತಪಟ್ಟ ಸರಕಾರಿ ನೌಕರರಿಗೂ ಪರಿಹಾರ ಧನ ಬಿಡುಗಡೆ ಮಾಡುವಂತೆ ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.