ರಾಜ್ಯದ ಶಾಲಾ- ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ – ಹಿಜಾಬ್ ವಿವಾದದಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ…..

Suddi Sante Desk

ಬೆಂಗಳೂರು –

ದಿನದಿಂದ ದಿನಕ್ಕೆ ರಾಜ್ಯದಲ್ಲಿ ತೀವ್ರಗೊಳ್ಳುತ್ತಿರುವ ಹಿಜಾಬ್ ವಿವಾದದಿಂದ ರಾಜ್ಯ ಸರ್ಕಾರ ಕೊನೆಗೂ ಎಚ್ಚೆತ್ತುಕೊಂಡಿದ್ದು ಸಮವಸ್ತ್ರವನ್ನು ಕಡ್ಡಾಯಗೊಳಿಸಿ ಆದೇಶವನ್ನು ಮಾಡಿದೆ.ಹೌದು ಸರ್ಕಾರದ ಎಲ್ಲ ಶಾಲಾ ಕಾಲೇಜುಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಸಮವಸ್ತ್ರ ವನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ. ಖಾಸಗಿ ಶಾಲೆಗಳು ತಮ್ಮ ಆಡಳಿತ ಮಂಡಳಿ ನಿರ್ಧರಿಸಿ ರುವ ಸಮವಸ್ತ್ರವನ್ನೇ ಧರಿಸಬೇಕು.ಕರ್ನಾಟಕದಲ್ಲಿ ಹಿಜಾಬ್- ಕೇಸರಿ ಶಾಲಿನ ವಿವಾದ ಭುಗಿಲೆದ್ದ ಬೆನ್ನಲ್ಲೇ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿ ಸಿರುವ ಸಮವಸ್ತ್ರವನ್ನೇ ಕಡ್ಡಾಯವಾಗಿ ಧರಿಸಬೇಕು ಎಂದು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಪದವಿ ಪೂರ್ವ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿನ ಕಾಲೇಜುಗಳಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಅಥವಾ ಆಡಳಿತ ಮಂಡಳಿ ಮೇಲ್ವಿಚಾರಣಾ ಸಮಿತಿ ನಿರ್ಧರಿಸುವ ಸಮವಸ್ತ್ರ ಧರಿಸಬೇಕು. ಒಂದು ವೇಳೆ ಆಡಳಿತ ಮಂಡಳಿ ಸಮವಸ್ತ್ರ ನಿಗದಿಪಡಿಸದೆ ಇದ್ದರೆ ಸಮಾನತೆ ಮತ್ತು ಐಕ್ಯತೆ ಯನ್ನು ಕಾಪಾಡಿಕೊಂಡು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ಬರದಿರುವ ಉಡುಪು ಧರಿಸಬೇಕು ಎಂದು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ದೇಶಾದ್ಯಂತ ಕರ್ನಾಟಕದ ಹಿಜಾಬ್ ವಿವಾದ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲಾ- ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ವಸ್ತ್ರಸಂಹಿತೆ ಕುರಿತು ಸುತ್ತೋಲೆ ಹೊರಡಿಸಲಾಗಿದೆ. ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಎಸ್. ಪದ್ಮಿನಿ ಇಂದು ಸುತ್ತೋಲೆ ಹೊರಡಿಸಿದ್ದಾರೆ. ಸರ್ಕಾರದ ಎಲ್ಲ ಶಾಲಾ- ಕಾಲೇಜುಗಳಿಗೆ ಸಮವಸ್ತ್ರ ಕಡ್ಡಾಯಗೊಳಿಸಲಾಗಿದೆ. ಸರ್ಕಾರ ನಿಗದಿಪಡಿ ಸಿರುವ ಸಮವಸ್ತ್ರವನ್ನು ಕಡ್ಡಾಯಗೊಳಿಸಿ ಆದೇಶ ಹೊರ ಡಿಸಲಾಗಿದೆ.ಖಾಸಗಿ ಶಾಲೆಗಳು ತಮ್ಮ ಆಡಳಿತ ಮಂಡಳಿ ನಿರ್ಧರಿಸಿರುವಂತಹ ಸಮವಸ್ತ್ರವನ್ನೇ ಧರಿಸಬೇಕು. ಹಿಜಾಬ್ ವಿವಾದದ ಬೆನ್ನಲ್ಲೇ ಸಮವಸ್ತ್ರ ಕುರಿತು ಆದೇಶ ಹೊರಡಿಸಲಾಗಿದೆ. ಆಯಾ ಶಾಲೆಗಳು ನಿಗದಿಪಡಿಸಿರುವ ಸಮವಸ್ತ್ರವೇ ಕಡ್ಡಾಯವಾಗಿದೆ.

ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿದ ಸಮವಸ್ತ್ರ ವನ್ನು ಕಡ್ಡಾಯಗೊಳಿಸಲಾಗಿದೆ. ಖಾಸಗಿ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿಗಳ ನಿರ್ಧಾರವೇ ಅಂತಿಮ ವಾಗಿದೆ.ಹಿಜಾಬ್,ಕೇಸರಿ ಶಾಲು ಜಟಾಪಟಿಗೆ ಬ್ರೇಕ್ ಹಾಕಲು ಪ್ರಯತ್ನ ಮಾಡಲಾಗಿದೆ.ಕರ್ನಾಟಕದಲ್ಲಿ ಸರ್ಕಾರ ಏಕರೂಪದ ಸಮವಸ್ತ್ರವನ್ನು ಜಾರಿಗೊಳಿಸಿದೆ. ಶಾಲಾ- ಕಾಲೇಜಿನಲ್ಲಿ ಏಕರೂಪದ ಸಮವಸ್ತ್ರ ಫಿಕ್ಸ್ ಮಾಡಲಾಗಿದೆ. ಪಿಯು ಕಾಲೇಜುಗಳಲ್ಲಿ ನಿಗದಿಪಡಿಸಿದ ಸಮವಸ್ತ್ರವೇ ಅಂತಿಮವಾಗಿದೆ.ಕಾಲೇಜು ಅಭಿವೃದ್ಧಿ ಸಮಿತಿ ನಿರ್ಧರಿಸಿ ರುವ ಯೂನಿಫಾರ್ಮ್ ಧರಿಸುವುದು ಕಡ್ಡಾಯವಾಗಿದೆ.

ಕಾಲೇಜು ಸಮವಸ್ತ್ರ ನಿಗದಿಪಡಿಸದಿದ್ದರೆ ಸಮರ್ಪಕ ಉಡುಪು ಧರಿಸಬೇಕು. ಸಮಾನತೆ, ಐಕ್ಯತೆ ಜೊತೆ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಆಗದಂತೆ ಉಡುಪು ಧರಿಸುವುದು ಕಡ್ಡಾಯವಾಗಿದೆ.ಪದವಿ ಪೂರ್ವ ಕಾಲೇಜು ಗಳಿಗೂ ಕಡ್ಡಾಯ ಸಮವಸ್ತ್ರವನ್ನು ಸರ್ಕಾರ ನಿಗದಿಪಡಿ ಸಿದೆ.ಕರ್ನಾಟಕ ಶಿಕ್ಷಣ ಕಾಯ್ದೆ 1983 ರ ಅನ್ವಯ ವಸ್ತ್ರ ಸಂಹಿತೆ ಜಾರಿ ಮಾಡಲಾಗಿದೆ. ಖಾಸಗಿ ಶಾಲೆಗಳು ಆಡಳಿತ ಮಂಡಳಿ ನಿರ್ಧರಿಸಿರುವಂತಹ ಸಮವಸ್ತ್ರ ಧರಿಸಬೇಕು. ಪದವಿ ಪೂರ್ವ ಕಾಲೇಜುಗಳಲ್ಲಿ CDC ಅಥವಾ ಮಂಡಳಿ ನಿಗದಿಪಡಿಸಿರುವ ಸಮವಸ್ತ್ರ ಧರಿಸಬೇಕು.ಕಾಲೇಜು ಗಳಲ್ಲಿ CDC ಅಥವಾ ಆಡಳಿತ ಮಂಡಳಿ ಸಮವಸ್ತ್ರ ನಿಗದಿಪಡಿಸದಿದ್ದರೆ ಸಮಾನತೆ ಹಾಗೂ ಐಕ್ಯತೆ ಯನ್ನು ಕಾಪಾಡಿಕೊಂಡು ಹಾಗೂ ಸಾರ್ವಜನಿಕ ಸುವ್ಯವ ಸ್ಥೆಗೆ ಭಂಗ ಬರದಂತೆ ಇರುವ ಉಡುಪು ಧರಿಸಬೇಕೆಂದು ಆದೇಶಿಸಲಾಗಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.