This is the title of the web page
This is the title of the web page

Live Stream

[ytplayer id=’1198′]

May 2025
T F S S M T W
1234567
891011121314
15161718192021
22232425262728
293031  

| Latest Version 8.0.1 |

State Newsಬೆಂಗಳೂರು ನಗರ

ವರ್ಗಾವಣೆ ವಿಚಾರ ದಲ್ಲಿ ರಾಜ್ಯದ ಸರ್ಕಾರಿ ನೌಕರರಿಗೆ ಶಾಕ್ ನೀಡಿದ ರಾಜ್ಯ ಸರ್ಕಾರ – ಸ್ವತಃ ಕೋರಿಕೆಯ ಮೇಲೆ ಇದ್ದ ಅವಕಾಶವನ್ನು ಕಿತ್ತುಕೊಂಡ ಸರ್ಕಾರ…..

ವರ್ಗಾವಣೆ ವಿಚಾರ ದಲ್ಲಿ ರಾಜ್ಯದ ಸರ್ಕಾರಿ ನೌಕರರಿಗೆ ಶಾಕ್ ನೀಡಿದ ರಾಜ್ಯ ಸರ್ಕಾರ – ಸ್ವತಃ ಕೋರಿಕೆಯ ಮೇಲೆ ಇದ್ದ ಅವಕಾಶವನ್ನು ಕಿತ್ತುಕೊಂಡ ಸರ್ಕಾರ…..
WhatsApp Group Join Now
Telegram Group Join Now

ಬೆಂಗಳೂರು

ಕರ್ನಾಟಕ ನಾಗರೀಕ ಸೇವಾ ಸಾಮಾನ್ಯ ನೇಮಕಾತಿ ನಿಯಮದ ತಿದ್ದುಪಡಿಯಿಂದಾಗಿ ಸಿ ಮತ್ತು ಡಿ ವೃಂದದ ನೌಕರರಿಗೆ ಸಂಕಷ್ಟ ಎದು ರಾಗಿದೆ.ನೌಕರರಿಗೆ ಸ್ವಂತ ಕೋರಿಕೆಯ ಮೇಲೆ ವರ್ಗಾವಣೆಗೆ ಇದ್ದ ಅವಕಾಶವನ್ನು ಕಸಿದು ಕೊಂಡಂತಾಗಿದ್ದು ನೌಕರರ ವಲಯದಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.ಹಿಂದಿನಂತೆಯೇ ಸಿ ಮತ್ತು ಡಿ ದರ್ಜೆ ನೌಕರರನ್ನು ಒಂದು ಜೇಷ್ಠತಾ ಘಟಕದಿಂದ ಮತ್ತೊಂದು ಘಟಕದ ಸಮಾನ ಹುದ್ದೆಗೆ ಸ್ವಂತ ಕೋರಿಕೆ ಮೇರೆಗೆ ವರ್ಗಾವಣೆ ಗೊಳಿಸಲು ಇಲಾಖೆಯ ಮುಖ್ಯಸ್ಥರಿಗೆ ಇದ್ದ ಅಧಿಕಾರವನ್ನು ಮರು ಸ್ಥಾಪಿಸಬೇಕೆಂದು ಒತ್ತಾಯಿಸಲಾಗಿದ್ದು ಈ ಒಂದು ತಿದ್ದುಪಡಿ ನಿಯಮಗಳನ್ನು ಈ ಕೂಡಲೇ ಹಿಂಪಡೆಯಬೇ ಕೆಂದು ನೌಕರರು ಆಗ್ರಹಿಸಿದ್ದಾರೆ.

ಸಿ ಮತ್ತು ಡಿ ದರ್ಜೆ ನೌಕರರಿಗೆ ವರ್ಗಾವಣೆ ಸಂಕಷ್ಟ ಎದುರಾಗಿದ್ದು ಸ್ವಂತ ಕೋರಿಕೆಯ ಅಂತರ ಜಿಲ್ಲಾ ಅಂತರ ವಲಯ ಮತ್ತು ಕಮಿಷ ನರೇಟ್ ವರ್ಗಾವಣೆಗಿದ್ದ ಅವಕಾಶವನ್ನು ಕಸಿದು ಕೊಂಡಂತಾಗಿದೆ ಈ ತಿದ್ದುಪಡಿ ನಿಯಮದಿಂದ ಸಿ ಮತ್ತು ಡಿ ದರ್ಜೆ ನೌಕರರಿಗೆ ಕೋರಿಕೆ ವರ್ಗಾವಣೆ ಇಲ್ಲವಾಗಿದೆ.

ಸೇವಾವಧಿ ಪೂರ್ಣ ಸಾಮಾನ್ಯ ವರ್ಗಾವಣೆ ಅನ್ವಯವೇ ಕಾರ್ಯ ನಿರ್ವಹಿಸಬೇಕಾಗುತ್ತದೆ. ಪೊಲೀಸ್ ಇಲಾಖೆಯಲ್ಲಿ ಸರಿಯಾಗಿ ರಜೆ ಸಿಗು ವುದಿಲ್ಲ. ಹೀಗಾಗಿ ಕುಟುಂಬದ ಯೋಗಕ್ಷೇಮ ನೋಡಲು ಆಗುವುದಿಲ್ಲ ಕೌಟುಂಬಿಕ ಸಮಸ್ಯೆ ಗಳು ಅನಾರೋಗ್ಯ ಪೀಡಿತರಿಗೆ ವೈದ್ಯಕೀಯ ಚಿಕಿತ್ಸೆ ಕೊಡಿಸಲು ಪರದಾಡಬೇಕಾಗುತ್ತದೆ. ಹೀಗಾಗಿ ಒತ್ತಡದಲ್ಲೇ ಕೆಲಸ ಮಾಡಬೇಕಾಗುತ್ತದೆ

ಪತಿ-ಪತ್ನಿ ಸೇವಾ ಅವಧಿ ಪೂರ್ತಿ ಒಂದೇ ಜಿಲ್ಲೆ ಅಥವಾ ವಲಯದಲ್ಲಿ ಕೆಲಸ ಮಾಡಲು ಅವಕಾಶವಿಲ್ಲದಂತಾಗುತ್ತಿದ್ದು ಹೀಗಾಗಿ ಸರ್ಕಾರಿ ನೌಕರರ ಸಂಘಟನೆ ನೌಕರರು ಮುಂದೇನು ಮಾಡತಾರೆ ಎಂಬೊಂದನ್ನು ಕಾದು ನೋಡಬೇಕಿದೆ

 

ವರದಿ – ರಕ್ಷಿತ ಜೊತೆಗೆ ಗೌತಮ್ ಸುದ್ದಿ ಸಂತೆ ನ್ಯೂಸ್ ಬೆಂಗಳೂರು.

 


Google News

 

 

WhatsApp Group Join Now
Telegram Group Join Now
Suddi Sante Desk