ರಾಜ್ಯದ 5,8,9 ತರಗತಿಗಳ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ಎಲ್ಲಾ ಗೊಂದಲಗಳಿಗೆ ತೆರೆ ಏಳೆದ ಸರ್ಕಾರ…..

Suddi Sante Desk
ರಾಜ್ಯದ 5,8,9 ತರಗತಿಗಳ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ಎಲ್ಲಾ ಗೊಂದಲಗಳಿಗೆ ತೆರೆ ಏಳೆದ ಸರ್ಕಾರ…..

ಬೆಂಗಳೂರು

ರಾಜ್ಯದ 5,8,9. ವಿದ್ಯಾರ್ಥಿಗಳನ್ನು ಪಾಸ್ ಮಾಡಿದ ಇಲಾಖೆ ಎಲ್ಲಾ ರೀತಿಯ ಗೊಂದಲ ಗಳಿಗೆ ತೆರೆ ಏಳೆದ ರಾಜ್ಯ ಸರ್ಕಾರ ಹೌದು ರಾಜ್ಯದ ಎಲ್ಲಾ ಶಾಲೆಗಳ 5, 8 ಹಾಗೂ 9ನೇ ತರಗತಿಯ ವಿದ್ಯಾರ್ಥಿಗಳನ್ನು ಮುಂದಿನ ಶೈಕ್ಷಣಿಕ ತರಗತಿ ಯಲ್ಲಿ ಮುಂದುವರಿಸಲು ಅವಕಾಶ ಕಲ್ಪಿಸಲಾ ಗಿದೆ.

2023-24ನೇ ಸಾಲಿನ ಫಲಿತಾಂಶವನ್ನು ರಾಜ್ಯದ ಎಲ್ಲ ಶಾಲೆಗಳಲ್ಲಿ ಏಪ್ರಿಲ್‌ 8ರಂದು ಪ್ರಕಟಿಸು ವಂತೆ ಈ ಹಿಂದೆ ಸೂಚಿಸಲಾಗಿತ್ತು ಆದರೆ ಫಲಿ ತಾಂಶ ಪ್ರಕಟಿಸದಂತೆ ಸುಪ್ರೀಂ ಕೋರ್ಟ್‌ ತಡೆ ಯಾಜ್ಞೆ ನೀಡಿದ್ದರಿಂದ ಇನ್ನೂ ಫಲಿತಾಂಶ ಪ್ರಕಟವಾಗಿಲ್ಲ.

2024-25ನೇ ಸಾಲಿನ ಶೈಕ್ಷಣಿಕ ಸಾಲು ಇದೇ 29ರಿಂದ ಆರಂಭಗೊಳ್ಳಲಿದೆ. ಕಳೆದ ಶೈಕ್ಷಣಿಕ ಸಾಲಿನ ಫಲಿತಾಂಶ ಪ್ರಕಟ ಆಗದಿರುವ ಪರಿ ಣಾಮ 5, 8 ಹಾಗೂ 9ನೇ ತರಗತಿ ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ತರಗತಿಗೆ ಪ್ರವೇಶ, ದಾಖ ಲಾತಿ ಪ್ರವೇಶ ಶುಲ್ಕ ಪಾವತಿ ಹಾಗೂ ಬೇರೆ ಸ್ಥಳಗಳಿಗೆ ವರ್ಗಾವಣೆಗೆ ಪ್ರಮಾಣ ಪತ್ರ, ಪ್ರಗತಿ ಪತ್ರ, ವ್ಯಾಸಂಗ ಪ್ರಮಾಣ ಪತ್ರ ವಿತರಿಸಲು ಶಾಲೆಗಳಿಗೆ ಸಾಧ್ಯವಾಗಿರಲಿಲ್ಲ.

ಮಕ್ಕಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಶಾಲೆಗಳಲ್ಲಿ ನಡೆದಿರುವ ಪರೀಕ್ಷೆಗಳ ಮೌಲ್ಯಾಂ ಕನ ಆಧರಿಸಿ ಮುಂದಿನ ತರಗತಿಯಲ್ಲಿ ಮುಂದು ವರಿಸಲು ಅವಕಾಶ ಕಲ್ಪಿಸುವಂತೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿ.ಬಿ.ಕಾವೇರಿ ಸೂಚಿಸಿದ್ಧಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.