This is the title of the web page
This is the title of the web page

Live Stream

[ytplayer id=’1198′]

September 2025
T F S S M T W
 123
45678910
11121314151617
18192021222324
252627282930  

| Latest Version 8.0.1 |

international News

ಮುಖ್ಯಶಿಕ್ಷಕನ ಮೇಲೆ ದೂರು ದಾಖಲು – ಅಮಾನತು ಮಾಡಿ ಆದೇಶ ಮಾಡಿದ ಮೇಲಾಧಿಕಾರಿ ಗಳು…..

WhatsApp Group Join Now
Telegram Group Join Now

ಲಖನೌ –

ಶಾಲೆಯಲ್ಲಿ ಎಲ್ಲರೊಂದಿಗೆ ಕೂಡಿಸದೇ ಪ್ರತ್ಯೇಕ ವಾಗಿ ದಲಿತ ಸಮಾಜದ ವಿದ್ಯಾರ್ಥಿಯೊಬ್ಬರನ್ನು ಕೂಡಿಸಿ ಊಟ ಮಾಡಿಸಿದ ಆರೋಪದ ಮೇಲೆ ಶಾಲೆಯ ಮುಖ್ಯ ಶಿಕ್ಷಕರೊಬ್ಬರನ್ನು ಅಮಾನತು ಮಾಡಲಾಗಿದೆ.ಹೌದು ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯ ವನಪುರ್ವಾ ಗಡೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಪ್ರಾಥಮಿಕ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ.

ಈ ಶಾಲೆಯ ಮುಖ್ಯ ಶಿಕ್ಷಕ ಕುಸುಮ್ ಸೋನಿ, ಮಧ್ಯಾಹ್ನದ ಊಟದ ವೇಳೆ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳನ್ನು ಪ್ರತ್ಯೇಕ ಸರತಿ ಸಾಲಿನಲ್ಲಿ ಕೂರಿಸಿದ್ದರಂತೆ ಅಲ್ಲದೇ ವಿದ್ಯಾರ್ಥಿಗಳನ್ನು ಥಳಿಸಿ ದ್ದಾರಂತೆ.ಈ ಕುರಿತಂತೆ ವಿದ್ಯಾರ್ಥಿಗಳ ಪೋಷಕರು ಆರೋಪವನ್ನು ಮಾಡಿದ್ದರು ಇದರ ಬೆನ್ನಲ್ಲೇ ಮುಖ್ಯ ಶಿಕ್ಷಕನ ಮೇಲೆ ದೂರು ದಾಖಲಾಗಿತ್ತು ಅತ್ತ ದೂರು ದಾಖಲಾಗುತ್ತಿದ್ದಂತೆ ಇತ್ತ ಇವರನ್ನು ಅಮಾನತು ಮಾಡಲಾಗಿದೆ.

ಹೌದು ಶಿಕ್ಷಕ ಕುಸುಮ್ ಸೋನಿ ವಿದ್ಯಾರ್ಥಿಗಳನ್ನು ಥಳಿಸಿದ್ದಾರೆ ಮತ್ತು ಊಟಕ್ಕೆ ಮೇಲ್ಜಾತಿ ಮತ್ತು ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಸರತಿ ಸಾಲುಗಳನ್ನು ಮಾಡಿದ್ದರು ಎಂದು ದಲಿತ ಸಮುದಾಯಕ್ಕೆ ಸೇರಿದ ಪೋಷಕರು ಆರೋಪ ವನ್ನು ಮಾಡಿದ್ದರು.ಇನ್ನೂ ನಾನು ಎಲ್ಲರನ್ನೂ ಸಮಾನವಾಗಿ ನೋಡುತ್ತೇನೆ.ಎಲ್ಲಾ ವಿದ್ಯಾರ್ಥಿ ಗಳನ್ನು ಒಟ್ಟಿಗೆ ಕೂರಿಸಲಾಗಿದೆ.

ತಾನು ಹಳ್ಳಿಯ ಮುಖ್ಯಸ್ಥನ ಪ್ರತಿನಿಧಿ ಎಂದು ಹೇಳಿಕೊಂಡ ಪವನ್ ದುಬೆ ಎಂಬ ವ್ಯಕ್ತಿ ಇಲ್ಲಿಗೆ ಬಂದು ಎಲ್ಲರನ್ನು ಹೊರಗೆ ತಳ್ಳಿ,ಗೇಟ್‌ಗಳನ್ನು ಲಾಕ್ ಮಾಡಿ, ಶಾಲೆಯ ಚಿತ್ರಗಳನ್ನು ಕ್ಲಿಕ್ ಮಾಡಿ, ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಸಂಬಂಧ ನಾನು ಅವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಶಿಕ್ಷಕರು ಹೇಳಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk