ಚಿಕ್ಕೋಡಿ –
ಶಿಕ್ಷಕನ ಬಳಿ ಭಿಕ್ಷೆ ಬೇಡಲು ಬಂದ ಮಹಿಳೆಗೆ 20 ರೂಪಾಯಿ ನೀಡುತ್ತೇನೆ ಎಂದು ಹೇಳಿ ಅಸಭ್ಯವಾಗಿ ವರ್ತಿಸಿದ ಶಿಕ್ಷಕನಿಗೆ ಸಾರ್ವಜನಿಕರು ಥಳಿಸಿರುವ ಘಟನೆ ಚಿಕ್ಕೋಡಿಯ ಕುಡಚಿ ಪಟ್ಟಣದಲ್ಲಿ ನಡೆದಿದೆ. ಭಿಕ್ಷುಕಿಯೊಂ ದಿಗೆ ಅಸಭ್ಯವಾಗಿ ವರ್ತಿಸಿದ ಶಿಕ್ಷಕರೊಬ್ಬರಿಗೆ ಸಾರ್ವಜನಿ ಕರು ಹಿಡಿದು ಥಳಿಸಿದ್ದಾರೆ.ಕುಡಚಿ ಪಟ್ಟಣದ ಬಸ್ ನಿಲ್ದಾಣ ದಲ್ಲಿ ನಡೆದಿದೆ.ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಶಿಕ್ಷಕ ಆರಗೆ ಎಂಬುವವರ ವಿರುದ್ದ ಭಿಕ್ಷುಕಿಯೊಂದಿಗೆ ಅಸಭ್ಯ ವರ್ತನೆ ತೋರಿದ ಆರೋಪ ಕೇಳಿ ಬಂದಿದೆ.

ಭಿಕ್ಷುಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಶಿಕ್ಷಕನಿಗೆ ಧರ್ಮದೇಟು ನೀಡಿದ್ದು ಕುಡಿದ ಅಮಲಿನಲ್ಲಿದ್ದ ಶಿಕ್ಷಕನ ಬಳಿ ಭಿಕ್ಷೆ ಬೇಡಲು ಬಂದ ಮಹಿಳೆಗೆ 20 ರೂಪಾಯಿ ನೀಡುತ್ತೇನೆ ಎಂದು ಹೇಳಿ ಅಸಭ್ಯವಾಗಿ ಮಾತನಾಡಿದ್ದಾನೆ. ಇದರಿಂದ ರೊಚ್ಚಿಗೆದ್ದ ಭಿಕ್ಷುಕಿ ಮಹಿಳೆ ಸಾರ್ವಜನಿಕರಿಗೆ ತಿಳಿಸಿದ್ದಾರೆ.ಶಿಕ್ಷಕನ ಅಸಭ್ಯ ವರ್ತನೆ ಕಂಡು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.