This is the title of the web page
This is the title of the web page

Live Stream

[ytplayer id=’1198′]

August 2025
T F S S M T W
 123456
78910111213
14151617181920
21222324252627
28293031  

| Latest Version 8.0.1 |

State News

ಶಿಕ್ಷಕನಿಗೆ ಪೆಪ್ಪರ್ ಸ್ಪ್ರೇ ಹೊಡೆದು 2 ಲಕ್ಷ ದರೋಡೆ – ಮನೆ ಕಟ್ಟಲು ಬ್ಯಾಂಕ್ ನಿಂದ ತಗೆದುಕೊಂಡು ಹಣ ತಗೆದುಕೊಂಡು ಹೋಗುತ್ತಿದ್ದರು…..

WhatsApp Group Join Now
Telegram Group Join Now

ಚಾಮರಾಜನಗರ –

ಶಿಕ್ಷಕರೊಬ್ಬರಿಗೆ ಪೇಪ್ಪರ್ ಸ್ಪ್ರೇ ಹೊಡೆದು ಹಾಡಹಗಲೇ ಎರಡು ಲಕ್ಷ ರೂಪಾಯಿ ದರೋಡೆ ಮಾಡಿದ ಘಟನೆ ಚಾಮರಾಜನಗರದಲ್ಲಿ ನಡೆದಿದೆ.ನಗರದ ಭುವನೇಶ್ವರಿ ವೃತ್ತದ ಸಮೀಪ ಈ ಒಂದು ಘಟನೆ ನಡೆದಿದೆ

ಚಾಮರಾಜನಗರ ತಾಲೂಕಿನ ಕಾಳನಹುಂಡಿಯಲ್ಲಿ ಶಿಕ್ಷಕನಾಗಿ ಸೇವೆ ಸಲ್ಲಿಸುತ್ತಿರುವ ನಗರದ ಹೌಸಿಂಗ್ ಬೋರ್ಡ್ ನಿವಾಸಿ ಶಿವಕುಮಾರ್ ಮನೆ ಕಟ್ಟಿಸುವ ಸಲುವಾಗಿ ಇಟ್ಟಿದ್ದ ಒಂದು ಲಕ್ಷ ರೂ ಹಣ ಮತ್ತು ಕೆನರಾ ಬ್ಯಾಂಕಿನಲ್ಲಿ ಒಂದು ಲಕ್ಷ ರೂ ಹೌಸಿಂಗ್ ಲೋನ್ ಹಣ ಡ್ರಾ ಮಾಡಿಕೊಂಡು ಬರುತ್ತಿದ್ದರು.

ತಾವು ತಂದಿದ್ದ ಬ್ಯಾಗ್ ನಲ್ಲಿ 2 ಲಕ್ಷ ರೂ ಹಾಕಿಕೊಂಡು ಬಸ್ ಗಾಗಿ ಕಾಯುತ್ತಿದ್ದರು.ಇದನ್ನು ಗಮನಿಸಿದ ಕಳ್ಳನೊಬ್ಬ ಬಸ್ ಗಾಗಿ ಕಾಯುತ್ತಿದ್ದ ಶಿಕ್ಷಕನ ಕಣ್ಣಿಗೆ ಪೆಪ್ಪರ್ ಸ್ಪ್ರೇ ಹೊಡೆದಿದ್ದಾನೆ.ಕೂಡಲೇ ಶಿವಕುಮಾರ್ ಕಣ್ಣಿಗೆ ಉರಿ ಕಾಣಿಸಿಕೊಂಡಿದ್ದರಿಂದ ಬ್ಯಾಗ್ ನ್ನು ಪಕ್ಕಕ್ಕಿಟ್ಟು ವಾಟರ್ ಬಾಟಲ್ ಮುಖವನ್ನು ತೊಳೆದುಕೊಳ್ಳುತ್ತಿದ್ದರು.

ಈ ವೇಳೆ ಕಳ್ಳ ಹಣವಿದ್ದ ಬ್ಯಾಗ್ ವನ್ನು ಲಪಟಾಯಿಸಿ ಪರಾರಿಯಾಗಿದ್ದಾನೆ.ಈ ಸಂಬಂಧ ಚಾಮರಾಜನಗರ ಪಟ್ಟಣ ಠಾಣೆಯಲ್ಲಿ ದೂರು ದಾಖಲಾಗಿದ್ದು ಭುವನೇಶ್ವರಿ ವೃತ್ತದ ಆಸುಪಾಸಿನ ಮಳಿಗೆಗಳಲ್ಲಿರುವ ಸಿಸಿ ಟಿವಿ ಗಳನ್ನು ಪೊಲೀಸರು ಈಗ ಜಾಲಾಡುತ್ತಿದ್ದಾರೆ‌.


Google News

 

 

WhatsApp Group Join Now
Telegram Group Join Now
Suddi Sante Desk