ಶಿಕ್ಷಕರ ಪ್ರತಿಭಟನೆ – ಸಿಡಿದೆದ್ದ ಶಿಕ್ಷಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ…..

Suddi Sante Desk
ಶಿಕ್ಷಕರ ಪ್ರತಿಭಟನೆ – ಸಿಡಿದೆದ್ದ ಶಿಕ್ಷಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ…..

ಬೆಳಗಾವಿ

ಸರ್ಕಾರಿ ಪ್ರಾಥಮಿಕ ಶಾಲೆಗಳ ಸೇವಾನಿರತ ಪದವೀ ಧರ ಶಿಕ್ಷಕರಿಗೆ ಸಂಬಂಧಿಸಿದ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಕಡತಕ್ಕೆ ತಕ್ಷಣವೇ ಅನು ಮೋದನೆ ನೀಡಬೇಕೆಂದು ಆಗ್ರಹಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಪದಾಧಿ ಕಾರಿಗಳು ನಗರದಲ್ಲಿ ಮಳೆಯಲ್ಲೇ ಪ್ರತಿಭಟನೆ ನಡೆಸಿದರು.ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಕಚೇರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ದರು.

‘ಒಂದರಿಂದ ಐದನೇ ತರಗತಿಗೆ ಪಾಠ ಮಾಡುವ ಶಿಕ್ಷಕರ ಪೈಕಿ, ಪದವೀಧರರಿಗೆ ಆರರಿಂದ ಎಂಟನೇ ತರಗತಿಗೆ ಪಾಠ ಪಾಡಲು ಜಿಪಿಟಿ ಶಿಕ್ಷಕರ ಹುದ್ದೆಗೆ ಬಡ್ತಿ ನೀಡ ಬೇಕು. ಇದಕ್ಕೆ ತೊಡಕಾಗಿರುವ ವೃಂದ ಮತ್ತು ನೇಮ ಕಾತಿ ನಿಯಮ-2017ಕ್ಕೆ ತಿದ್ದುಪಡಿ ಮಾಡಬೇಕು’ ಎಂದು ಒತ್ತಾಯಿಸಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಯಕುಮಾರ ಹೆಬಳಿ, ‘ಆ.25ರೊಳಗೆ ಬೇಡಿಕೆ ಈಡೇರದಿದ್ದರೆ, ರಾಜ್ಯದಲ್ಲಿನ ಎಲ್ಲ ಸರ್ಕಾರಿ ಶಾಲೆಗಳನ್ನು ಮುಚ್ಚಿ ಸೆ.3ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮುಷ್ಕರ ನಡೆಸುತ್ತೇವೆ. ಅಂದು ಸಹ ಬೇಡಿಕೆ ಈಡೇರದಿದ್ದರೆ ಸೆ.5ರಂದು ನಡೆಯುವ ಶಿಕ್ಷಕರ ದಿನಾಚರಣೆ ಬಹಿಷ್ಕರಿಸಿ, ಅಲ್ಲಿಯೇ ಹೋರಾಟ ಮುಂದುವರಿಸುತ್ತೇವೆ’ ಎಂದು ಎಚ್ಚರಿಕೆ ಕೊಟ್ಟರು.

ಮುಖಂಡರಾದ ರಮೇಶ ಗೋಣಿ, ಎಂ.ಎಫ್‌. ಸಿದ್ದನಗೌಡರ, ಎಸ್‌.ವಿ.ಹುಗ್ಗಿ, ವೈ.ಬಿ.‍‍ಪೂಜೇರಿ, ಕೆ.ಎಸ್‌.ರಾಚನ್ನವರ ಇತರರಿದ್ದರು.

ಸುದ್ದಿ ಸಂತೆ ನ್ಯೂಸ್ ಬೆಳಗಾವಿ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.