ಬೆಳಗಾವಿ –
ಸಾಮಾನ್ಯವಾಗಿ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳರು ಈಗ ಜ್ಞಾನ ದೇಗುಲ ಮೇಲೆ ಕಣ್ಣು ಹಾಕಿದ್ದಾರೆ.ಹೌದು ಇದಕ್ಕೆ ಸಾಕ್ಷಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿರುವ ಸರ್ಕಾರಿ ಶಾಲೆಯ ಕಳ್ಳತನ ಸರಕಾರಿ ಮರಾಠಿ ಪ್ರಾಥಮಿಕ ಶಾಲೆಯ ಬಾಗಿಲು ಕೀ ಒಡೆದು ಕಳ್ಳತನ ಮಾಡಲಾಗಿದೆ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ವಸ್ತುಗಳನ್ನು ಕಳ್ಳತನ ಮಾಡಲಾಗಿದೆ. ಕಂಪ್ಯೂಟರ್ ಪ್ರಿಂಟರ್ ಸೇರಿದಂತೆ ಶಾಲೆ ದಾಖಲಾತಿ ಕಳ್ಳತನ ಮಾಡಿದ್ದಾರೆ.ಈ ಹಿಂದೆ ಗ್ರಾಮದ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳರು ಈಗ ಜ್ಞಾನ ದೇಗುಲ ಮೇಲೆ ಕಣ್ಣು ಹಾಕಿದ್ದಾರೆ.ಈ ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ವ್ಯಕ್ತವಾಗಿದೆ.

ಇನ್ನೂ ಸುದ್ದಿ ತಿಳಿದ ಅಥಣಿ ಪೊಲೀಸ್ ಠಾಣೆಯ ಪೋಲೀಸರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ