ಹೆಚ್ಚುವರಿ ಶಿಕ್ಷಕರ ವರ್ಗಾವಣೆಗೆ ವಿರೋಧ ಭುಗಿಲೆದ್ದ ಆಕ್ರೋಶ – ಇಲಾಖೆಗೆ ಎಚ್ಚರಿಕೆ ಸಂದೇಶ ನೀಡಿದ ಗ್ರಾಮಸ್ಥರು…..

Suddi Sante Desk
ಹೆಚ್ಚುವರಿ ಶಿಕ್ಷಕರ ವರ್ಗಾವಣೆಗೆ ವಿರೋಧ ಭುಗಿಲೆದ್ದ ಆಕ್ರೋಶ – ಇಲಾಖೆಗೆ ಎಚ್ಚರಿಕೆ ಸಂದೇಶ ನೀಡಿದ ಗ್ರಾಮಸ್ಥರು…..

ಉತ್ತರಕನ್ನಡ

ಹೆಚ್ಚುವರಿ ಶಿಕ್ಷಕರನ್ನು ವರ್ಗಾವಣೆ ನಡೆಸಲು ಸರಕಾರ ಆದೇಶಿಸಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಖರ್ವಾ ಗ್ರಾಮದ ಯಲಗುಪ್ಪಾದಲ್ಲಿ ಭಾರೀ ವಿರೋಧ ಕಾಣಿಸಿಕೊಂಡಿದೆ.ಯಲಗುಪ್ಪಾ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 70 ಮಕ್ಕಳಿದ್ದು ಈ ಮಕ್ಕಳನ್ನು ಶಾಲೆಯಿಂದ ವಾಪಾಸ್ ಕರೆದೊಯ್ಯುವ ಮೂಲಕ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.‌

ಈ ಶಾಲೆಯ ಇಂಗ್ಲಿಷ್ ವಿಷಯದ ಶಿಕ್ಷಕಿ ಲಕ್ಷ್ಮೀ ಎಂಬವರಿಗೆ ವರ್ಗಾವಣೆಯಾಗಿದ್ದು ಆ ಶಿಕ್ಷಕಿ ಯನ್ನು ಶಾಲೆಯ ಸೇವೆಯಲ್ಲಿ ಇರಿಸಬೇಕೆಂದು ಒತ್ತಾಯಿಸಿ ಪೋಷಕರು ಹಾಗೂ ಶಾಲಾ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.ಸರಕಾರಿ ಶಾಲೆಗಳನ್ನು ಅಭಿವೃದ್ಧಿಗೊಳಿಸಬೇಕೆಂದು ಸರಕಾ ರವೇ ಹೇಳುತ್ತದೆ.‌ಆದರೆ ಉತ್ತಮ ಶಿಕ್ಷಕರನ್ನು ಹೆಚ್ಚುವರಿ ನೆಪದಲ್ಲಿ ಬೇರೆಡೆ ವರ್ಗಾವಣೆ ಮಾಡ ಲಾಗ್ತಿದೆ ಖಾಸಗಿ ಶಾಲೆಗಳ ಮುಂದೆ ಬಡವರ ಮಕ್ಕಳು ಬೆಳೆಯುವುದಾದರೂ ಹೇಗೆ ಎಂದು ಪ್ರಶ್ನೆ ಯನ್ನು ಮಾಡಿದರು

ಇನ್ನೂ ಈಗಾಗಲೇ ಜನಪ್ರತಿನಿಧಿಗಳು, ಜಿಲ್ಲಾ ಡಳಿತಕ್ಕೆ ಮನವಿ ಕೂಡಾ ಸಲ್ಲಿಸಿದ್ರೂ ಪ್ರಯೋ ಜನವಾಗಿಲ್ಲ.ಈ ಶಾಲೆಯ ಶಿಕ್ಷಕರ ವರ್ಗಾವಣೆ ನಿಲ್ಲಿಸದಿದ್ರೆ ಮಕ್ಕಳನ್ನು ಶಾಲೆಗೆ ಕಳುಹಿಸುವುದು ಇಲ್ಲ.ಶಿಕ್ಷಕಿಯ ವರ್ಗಾವಣೆಯನ್ನು ನಿಲ್ಲಿಸುವ ಬೇಡಿಕೆ ಈಡೇರದಿದ್ದಲ್ಲಿ ಭಾರೀ ಪ್ರತಿಭಟನೆ ನಡೆಸಲಾಗುವುದು ಎಂದು ಪೋಷಕರು ಎಚ್ಚರಿಕೆ ನೀಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಉತ್ತರಕನ್ನಡ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.